Featured

ಮಂಗಳೂರು ಗಲಭೆ ಮಾಡಲು ಮೊದಲೇ ಪ್ಲಾನ್ ಮಾಡಿದ್ದರು ಪ್ರತಿಭಟನಾಕಾರರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ -Vishwanews24

ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ.

ಮಂಗಳೂರು ಗೊಲಿಬಾರ್ ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಪೊಲೀಸ್ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಆದರೆ ಈ ಗಲಭೆ ನಡೆಸಲು ಕೆಲ ಪ್ರತಿಭಟನಾಕಾರರ ಗುಂಪು ಮೊದಲೇ ಪ್ಲಾನ್ ಮಾಡಿಕೊಂಡಿತ್ತು. ಗಲಭೆಗೂ ಮುನ್ನ ಕೆಲ ಗುಂಪು ಗೂಡ್ಸ್ ಆಟೋದಲ್ಲಿ ಕಲ್ಲುಗಳನ್ನು ತರೆಸಿಕೊಂಡಿದ್ದರು. ಗೋಣಿಚೀಲಗಳಲ್ಲಿ ಈ ಕಲ್ಲುಗಳನ್ನು ತುಂಬಿಸಿಡಲಾಗಿತ್ತು. ಈ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಲ ಪ್ರತಿಭಟನಾಕಾರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಲಾರಂಭಿಸಿದ್ದರು. ಬಳಿಕ ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಕೆಲವರು ಮೊದಲೇ ಗಲಭೆಗೆ ತಯಾರಿ ನಡೆಸಿಕೊಂಡೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಗಳು ಬಯಲು ಮಾಡಿದೆ.

ಯುವಕರಿದ್ದ ಒಂದು ಗುಂಪು ಪ್ರತಿಭಟನೆ ವೇಳೆ ಗಲಭೆ ನಡೆಸಲೆಂದೆ ಕಲ್ಲು ತಂದು ಹಾಕಿದರೆ, ಇನ್ನೊಂದು ಗುಂಪು ಸಿಸಿಟಿವಿಗಳನ್ನು ಒಡೆದು ಹಾಕಿ ಗಲಭೆ ಮಾಡಲು ಯತ್ನಿಸಿದ ದೃಶ್ಯಗಳು ಕೂಡ ಲಭ್ಯವಾಗಿದೆ. ಕಲ್ಲು ತೂರಾಟ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪ್ರತಿಭಟನಾಕಾರರು ಒಡೆಯಲು ಯತ್ನಿಸಿರುವುದು, ಮನೆಗಳ ಮುಂದಿದ್ದ ಕ್ಯಾಮೆರಾಗಳನ್ನು ತಿರುಗಿಸಿ ಹೋಗಿರುವ ದೃಶ್ಯಗಳು ಸೆರೆಯಾಗಿವೆ. ಅಷ್ಟೇ ಅಲ್ಲದೆ ಪೊಲೀಸ್ ವ್ಯಾನ್ ಬರುವುದನ್ನು ಗಮನಿಸಿ ರಸ್ತೆಗೆ ಅಡ್ಡವಾಗಿ ಕಬ್ಬಿಣದ ಕಂಬಗಳನ್ನು ಹಾಕಿ ಓಡಿಹೋಗಿರುವ ದೃಶ್ಯಾವಳಿಗಳು ಕೂಡ ಲಭ್ಯವಾಗಿದೆ.

ಪೊಲೀಸರ ಮನವಿ

ಫೋಟೋ – ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ದಂಗೆಕೋರರ ಬಗ್ಗೆ ಮಾಹಿತಿ ತಿಳಿದವರು ತಿಳಿಸುವಂತೆ ಮನವಿ ಮಾಡಿದ್ದಾರೆ. ದಂಗೆಕೋರರ ಮಾಹಿತಿ ಮತ್ತು ಅವರು ಇರುವ ಸ್ಥಳದ ಬಗ್ಗೆ ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇರಿಸುವುದಾಗಿ ಪ್ರಕಟಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago