Featured

ಮಂಗಳೂರು ಗಾಂಜಾ ಪ್ರಕರಣ : ಲಿವಿಂಗ್ ಟುಗೆದರ್ ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುವ ಮೆಡಿಕಲ್ ವಿದ್ಯಾರ್ಥಿಗಳ ಕರಾಳ ಲೋಕ ಬಯಲು – Vishwanews24

ಮಂಗಳೂರು ಗಾಂಜಾ ಪ್ರಕರಣ : ಲಿವಿಂಗ್ ಟುಗೆದರ್ ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುವ ಮೆಡಿಕಲ್ ವಿದ್ಯಾರ್ಥಿಗಳ ಕರಾಳ ಲೋಕ ಬಯಲು

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ನಡೆದಿದ್ದು, ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ವಿದ್ಯಾರ್ಥಿನಿಯರು ಮಾದಕ ನಶೆಯ ಚಟಕ್ಕೆ ಬೀಳಲು ಮುಖ್ಯ ಕಾರಣ ಅವರು ಲಿವಿಂಗ್ ಟುಗೆದರ್ ಸಂಬಂಧವನ್ನು ಹೊಂದಿದ್ದರು ಎಂಬುದು ತಿಳಿದು ಬಂದಿದೆ.

ಇವರಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದು, ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಂಡು ಯುವಕ-ಯುವತಿಯರು ಲಿವಿಂಗ್ ಟುಗೆದರ್ ಎಂದು ಒಟ್ಟಿಗೆ ಇರುತ್ತಾರೆ. ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುತ್ತಾರೆ ಎಂಬ ಅಚ್ಚರಿ ಮಾಹಿತಿ ಬಯಲಾಗಿದೆ.

ಮಂಗಳೂರಿನ ಹಲವು ಅಪಾರ್ಟ್ ಮೆಂಟ್ ಗಳಲ್ಲಿ ಲಿವಿಂಗ್ ಟುಗೆದರ್ ಎಂಬ ಹೆಸರಿನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ವಾಸ ಮಾಡುತ್ತಿದ್ದು, ಗಾಂಜಾ ನಶೆಯಲ್ಲಿ ತೇಲಾಡಿ..ತಮ್ಮ ಸ್ನೇಹಿತರನ್ನು ಕೂಡ ಇದಕ್ಕೆ ಸೆಳೆಯುತ್ತಿದ್ರು ಎಂಬ ವಿಚಾರ ತನಿಖೆ ವೇಳೆ ಹೊರಬಿದ್ದಿದೆ.

ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜು, ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್ (24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ (22), ಡಾ.ಹೀರಾ ಬಸಿನ್ (23) ಹಾಗೂ ವೈದ್ಯ ಡಾ.ಸಮೀರ್ (32), ಮಣಿಮಾರನ್ ಮುತ್ತು (28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್ (34) ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23) ಇವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ ಎಂಬಾತನನ್ನುಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈ ಸ್ಪೋಟಕ ಸತ್ಯ ಬಯಲಾಗಿದೆ. ಬಂಧಿತರಿಂದ 2 ಕೆ.ಜಿ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳನ್ನೇ ಟಾರ್ಗೆಟ್ ಮಾಡಿಕೊಂಡು ವಿದ್ಯಾರ್ಥಿಗಳು ಮತ್ತು ವೈದ್ಯರನ್ನೇ ಟಾರ್ಗೆಟ್ ಮಾಡಿಕೊಂಡಿದ್ದರು.

Vishwa News 24

Recent Posts

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

5 hours ago

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ – vishwanews24

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…

5 hours ago

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ – vishwanews24

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…

5 hours ago

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…

5 hours ago

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ…

5 hours ago

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…

5 hours ago