ಮಂಗಳೂರು : ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೇಸ್ ಪಾಳಯದಲ್ಲಿ ಸಿದ್ದತೆ ಜೋರಾಗಿ ನಡೆಯುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೂಡ ಸಿದ್ದತೆ ನಡೆದಿದ್ದು, ಕಾಂಗ್ರೇಸ್ ನ ಕಾರ್ಯಕರ್ತರ ಸಿದ್ದತೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಂಧಿ ಜಯಂತಿ ಹಿನ್ನಲೆಯಲ್ಲಿ ಅಕ್ಟೋಬರ್ 2 ರಂದು ಮಂಗಳೂರಿಗೆ ಗಾಂಧಿ ನಡಿಗೆ ಕಾರ್ಯಕ್ರಮವನ್ನು ಕಾಂಗ್ರೇಸ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ದತೆ ನಡೆಯುತ್ತಿದ್ದು, ನಡಿಗೆ ಕಾರ್ಯಕ್ರಮದಲ್ಲಿ ಮಾರ್ಚ್ ಪಾಸ್ಟ್ ಗೆ ಲಾಠಿ ಹಿಡಿದು ಕಾಂಗ್ರೇಸ್ ಕಾರ್ಯಕರ್ತರು ಸಿದ್ಧತೆ ನಡೆಸುತ್ತಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ಈ ಸಿದ್ದತೆ ನಡೆಯುತ್ತಿದ್ದು, ಆರ್ ಎಸ್ ಎಸ್ ನ ರೀತಿಯಲ್ಲೇ ಕಾಂಗ್ರೇಸ್ ಕಾರ್ಯಕರ್ತರಿಗೆ ಲಾಠಿ ನೀಡಿ ಮಾರ್ಚ್ ಫಾಸ್ಟ್ ನ ಟ್ರೈನಿಂಗ್ ನ್ನು ಮಾಜಿ ಸಚಿವ ಯು.ಟಿ.ಖಾದರ್ ನೀಡುತ್ತಿದ್ದಾರೆ. ಈ ಮಾರ್ಚ್ ಫಾಸ್ಟ್ ನಲ್ಲಿ ಟ್ರೈನಿಂಗ್ ನಲ್ಲಿ ಕಾಂಗ್ರೇಸ್ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದು, ಆರ್.ಎಸ್.ಎಸ್ ನಂತೆ ಲಾಠಿ ಹಿಡಿದು ತಾಲೀಮು ನಡೆಸುತ್ತಿದ್ದಾರೆ.
ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಕಾರ್ಯಕರ್ತರು ಪಥಸಂಚಲನ ತರಬೇತಿ ಮಾಡುತ್ತಿದ್ದಾರೆ. ವಿಶೇಷವೆಂದರೆ ಕಾಂಗ್ರೆಸ್ ಸೇವಾದಳದ ಸ್ವಯಂಸೇವಕರು ದಂಡವನ್ನು ಹಿಡಿದು ಪಥಸಂಚಲನ ನಡೆಸುತ್ತಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…