ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ ಜಗದೀಶ್ ಪುತ್ತೂರು ಅವರಿಗೆ ಒಮನ್ ತುಳುವೆರ್ ಸಂಘಟನೆಯು “ತುಳುನಾಡ ಗಾನ ಗಂಧರ್ವ ” ಬಿರುದು ನೀಡಿ ಅಭಿನಂದಿಸಿದೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್ ಪುತ್ತೂರು ಅವರು, ಓಮನ್ ತುಳುವೆರ್ ಅವರ ನಿರಂತರ ಪೋತ್ಸಾಹಕ್ಕಾಗಿ ಧನ್ಯವಾದಗಳು. ದಾಯ್ಜಿವಲ್ಡ್ ಟಿವಿಯಲ್ಲಿ ಮೂರು ಸಂಚಿಕೆಗಳಲ್ಲಿ ಪ್ರಸಾರವಾಗುವ ಗಾನಾ ಲೀಲೋತ್ಸವ ಕಾರ್ಯಕ್ರಮದ ಮೂಲಕ ಅವರು ನನಗೆ ಪ್ರೋತ್ಸಾಹ ನೀಡಿದ್ದಾರೆ. ಇಂತಹ ಪ್ರೋತ್ಸಾಹದ ಅಗತ್ಯವಿರುವ ಅನೇಕ ಗಾಯಕರಿದ್ದು, ಅವರ ಪ್ರತಿಭೆಗೆ ವೇದಿಕೆ ಕಲ್ಪಿಸಲು ಇಂತಹ ಪ್ರೋತ್ಸಾಹದ ಅಗತ್ಯವಿದೆ ಎಂದರು.
ಜಗದೀಶ್ ಪುತ್ತೂರು ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸನ್ಮಾನಿಸುತ್ತಿರುವುದು ಗಾಯನ ಕ್ಷೇತ್ರಕ್ಕೆ ನೀಡುವ ಗೌರವವಾಗಿದೆ ಎಂದು ನಿರ್ದೇಶಕ ವಿಜಯ್ಕುಮಾರ್ ಕೊಡಿಯಾಲ್ಬೈಲ್ ಹೇಳಿದರು.
ತುಳು ಭಾಷೆ ಹಾಗೂ ಸಂಸ್ಕೃತಿಯನ್ನು ಉತತೇಜಿಸುವಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಕಾರ್ಯವನ್ನು ಓಮನ್ ತುಳುವೆರ್ ಮಾಡಿದೆ. ಅವರು ಜಗದೀಶ್ ಪುತ್ತೂರು ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸಿದ್ದಾರೆ ಎಂದು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದರು.
ಈ ವೇಳೆ, ನಿರ್ಮಾಪಕ ಕಿಶೋರ್.ಡಿ.ಶೆಟ್ಟಿ, ಸಂಗೀತ ನಿರ್ದೇಶಕ ಕಿಶೋರ್ ಹಾಗೂ ನಿರ್ಮಾಪಕ ಸಂದೇಶ್ ಬಂಗೇರಾ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…