ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ ಜಗದೀಶ್ ಪುತ್ತೂರು ಅವರಿಗೆ ಒಮನ್ ತುಳುವೆರ್ ಸಂಘಟನೆಯು “ತುಳುನಾಡ ಗಾನ ಗಂಧರ್ವ ” ಬಿರುದು ನೀಡಿ ಅಭಿನಂದಿಸಿದೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್ ಪುತ್ತೂರು ಅವರು, ಓಮನ್ ತುಳುವೆರ್ ಅವರ ನಿರಂತರ ಪೋತ್ಸಾಹಕ್ಕಾಗಿ ಧನ್ಯವಾದಗಳು. ದಾಯ್ಜಿವಲ್ಡ್ ಟಿವಿಯಲ್ಲಿ ಮೂರು ಸಂಚಿಕೆಗಳಲ್ಲಿ ಪ್ರಸಾರವಾಗುವ ಗಾನಾ ಲೀಲೋತ್ಸವ ಕಾರ್ಯಕ್ರಮದ ಮೂಲಕ ಅವರು ನನಗೆ ಪ್ರೋತ್ಸಾಹ ನೀಡಿದ್ದಾರೆ. ಇಂತಹ ಪ್ರೋತ್ಸಾಹದ ಅಗತ್ಯವಿರುವ ಅನೇಕ ಗಾಯಕರಿದ್ದು, ಅವರ ಪ್ರತಿಭೆಗೆ ವೇದಿಕೆ ಕಲ್ಪಿಸಲು ಇಂತಹ ಪ್ರೋತ್ಸಾಹದ ಅಗತ್ಯವಿದೆ ಎಂದರು.
ಜಗದೀಶ್ ಪುತ್ತೂರು ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸನ್ಮಾನಿಸುತ್ತಿರುವುದು ಗಾಯನ ಕ್ಷೇತ್ರಕ್ಕೆ ನೀಡುವ ಗೌರವವಾಗಿದೆ ಎಂದು ನಿರ್ದೇಶಕ ವಿಜಯ್ಕುಮಾರ್ ಕೊಡಿಯಾಲ್ಬೈಲ್ ಹೇಳಿದರು.
ತುಳು ಭಾಷೆ ಹಾಗೂ ಸಂಸ್ಕೃತಿಯನ್ನು ಉತತೇಜಿಸುವಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಕಾರ್ಯವನ್ನು ಓಮನ್ ತುಳುವೆರ್ ಮಾಡಿದೆ. ಅವರು ಜಗದೀಶ್ ಪುತ್ತೂರು ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸಿದ್ದಾರೆ ಎಂದು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದರು.
ಈ ವೇಳೆ, ನಿರ್ಮಾಪಕ ಕಿಶೋರ್.ಡಿ.ಶೆಟ್ಟಿ, ಸಂಗೀತ ನಿರ್ದೇಶಕ ಕಿಶೋರ್ ಹಾಗೂ ನಿರ್ಮಾಪಕ ಸಂದೇಶ್ ಬಂಗೇರಾ ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…