ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ ಜಗದೀಶ್ ಪುತ್ತೂರು ಅವರಿಗೆ ಒಮನ್ ತುಳುವೆರ್ ಸಂಘಟನೆಯು “ತುಳುನಾಡ ಗಾನ ಗಂಧರ್ವ ” ಬಿರುದು ನೀಡಿ ಅಭಿನಂದಿಸಿದೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್ ಪುತ್ತೂರು ಅವರು, ಓಮನ್ ತುಳುವೆರ್ ಅವರ ನಿರಂತರ ಪೋತ್ಸಾಹಕ್ಕಾಗಿ ಧನ್ಯವಾದಗಳು. ದಾಯ್ಜಿವಲ್ಡ್ ಟಿವಿಯಲ್ಲಿ ಮೂರು ಸಂಚಿಕೆಗಳಲ್ಲಿ ಪ್ರಸಾರವಾಗುವ ಗಾನಾ ಲೀಲೋತ್ಸವ ಕಾರ್ಯಕ್ರಮದ ಮೂಲಕ ಅವರು ನನಗೆ ಪ್ರೋತ್ಸಾಹ ನೀಡಿದ್ದಾರೆ. ಇಂತಹ ಪ್ರೋತ್ಸಾಹದ ಅಗತ್ಯವಿರುವ ಅನೇಕ ಗಾಯಕರಿದ್ದು, ಅವರ ಪ್ರತಿಭೆಗೆ ವೇದಿಕೆ ಕಲ್ಪಿಸಲು ಇಂತಹ ಪ್ರೋತ್ಸಾಹದ ಅಗತ್ಯವಿದೆ ಎಂದರು.
ಜಗದೀಶ್ ಪುತ್ತೂರು ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸನ್ಮಾನಿಸುತ್ತಿರುವುದು ಗಾಯನ ಕ್ಷೇತ್ರಕ್ಕೆ ನೀಡುವ ಗೌರವವಾಗಿದೆ ಎಂದು ನಿರ್ದೇಶಕ ವಿಜಯ್ಕುಮಾರ್ ಕೊಡಿಯಾಲ್ಬೈಲ್ ಹೇಳಿದರು.
ತುಳು ಭಾಷೆ ಹಾಗೂ ಸಂಸ್ಕೃತಿಯನ್ನು ಉತತೇಜಿಸುವಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಕಾರ್ಯವನ್ನು ಓಮನ್ ತುಳುವೆರ್ ಮಾಡಿದೆ. ಅವರು ಜಗದೀಶ್ ಪುತ್ತೂರು ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸಿದ್ದಾರೆ ಎಂದು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದರು.
ಈ ವೇಳೆ, ನಿರ್ಮಾಪಕ ಕಿಶೋರ್.ಡಿ.ಶೆಟ್ಟಿ, ಸಂಗೀತ ನಿರ್ದೇಶಕ ಕಿಶೋರ್ ಹಾಗೂ ನಿರ್ಮಾಪಕ ಸಂದೇಶ್ ಬಂಗೇರಾ ಉಪಸ್ಥಿತರಿದ್ದರು.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…