ಮಂಗಳೂರು: ನಗರದಲ್ಲಿ ಗಿಳಿಗಳ ಮೂಲಕ ಶಾಸ್ತ್ರ ಹೇಳುತ್ತಿದ್ದ ಐವರನ್ನು ವಶಕ್ಕೆ ಪಡೆದುಕೊಂಡಿರುವ ಮಂಗಳೂರಿನ ಅರಣ್ಯಾಧಿಕಾರಿಗಳು ಆರೋಪಿಗಳಿಂದ ಐದು ಗಿಳಿ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಕದ್ರಿ ದೇವಸ್ಥಾನ ಸಮೀಪ ಶಾಸ್ತ್ರ ಹೇಳುವವರು ಕಾಯ್ದೆಗೆ ವಿರುದ್ಧವಾಗಿ ಗಿಳಿಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಹಾಗೂ ಐದು ಗಿಳಿ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಯಶವಂತಪುರ ನಿವಾಸಿ ಬಸವರಾಜ್, ಪಿಲ್ಲಹಳ್ಳಿ ನಿವಾಸಿಗಳಾದ ರಾಘವೇಂದ್ರ, ದುರ್ಗೇಶ್ ನಾಯ್ಕರ್, ಗೊರಗುಂಟೆಪಾಳ್ಯ ನಿವಾಸಿ ಅಶೋಕ್ ಬೋರ, ಪಿಲ್ಲಹಳ್ಳಿ ನಿವಾಸಿ ಅಣ್ಣಪ್ಪ ಆರ್. ಅವರನ್ನು ವಶಕ್ಕೆ ಪಡೆಯಲಾಗಿದೆ.
ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24
ಆರೋಪಿಗಳು ಶಾಸ್ತ್ರ ಹೇಳಲು ಅರಣ್ಯದ ಗಿಳಿಗಳನ್ನು ಹಿಡಿದು ಅವುಗಳು ಹಾರಿಹೋಗದಂತೆ ರೆಕ್ಕೆಯ ಗರಿಗಳು ಮತ್ತು ಮೂತಿ ಕತ್ತರಿಸಿ, ಶಾಸ್ತ್ರ ಹೇಳುವ ಸಂದರ್ಭ ಕಾರ್ಡ್ ತೆಗೆಯುವ ಕೆಲಸಕ್ಕೆ ಬಳಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಪ್ರಕಾರ ಈ ರೀತಿ ಹಕ್ಕಿಗಳನ್ನು ಬಳಕೆ ಮಾಡುವುದು ಅಪರಾಧವಾಗಿದೆ. ಕದ್ರಿ ದೇವಸ್ಥಾನದ ಬಳಿ ಗಿಳಿಗಳು ಕಂಡು ಬಂದಿದ್ದು, ಕೂಡಲೇ ಎನ್ಇಸಿಎಸ್ ಕಾರ್ಯಕರ್ತರೊಬ್ಬರು ಅರಣ್ಯ ಇಲಾಖೆ ಅಧಿಕಾರಿ ಶ್ರೀಧರ್ ಅವರಿಗೆ ಮಾಹಿತಿ ನೀಡಿದ್ದು, ಅವರ ಸಿಬ್ಬಂದಿ ಮೂಲಕ ಸ್ಥಳಕ್ಕೆ ತೆರಳಿ ಗಿಳಿ ಪೆಟ್ಟಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಈ ಬಗ್ಗೆ ಮುಂದಿನ ವಿಚಾರಣೆ ಕೈಗೊಂಡಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…