ಮಂಗಳೂರು : “ಡಿ.9ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರದ ಪ್ರತಿಭಟನೆಯಲ್ಲಿ ಪೊಲೀಸ್ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಆದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಪರಾಧ ಸಾಬೀತಾದರೆ, ಒಂದು ರೂಪಾಯಿಯು ಕೊಡಲ್ಲ. ಈ ಕುರಿತು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ” ಎಂದು ತಿಳಿಸಿದ್ದಾರೆ.
ಮಂಗಳವಾರ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಕೆಲವೊಂದು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರು. ವಿಡಿಯೋದಲ್ಲಿ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸುತ್ತಿರುವುದು ಬಹಿರಂಗಗೊಂಡಿತ್ತು. ಅಲ್ಲದೆ ಕೆಲವೆಡೆ ಸಿಸಿ ಕ್ಯಾಮರಾಗಳನ್ನು ಧ್ವಂಸ ಮಾಡುವುದು ಸೆರೆಯಾಗಿತ್ತು.
ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಅಧಿಕಾರಿಗಳ ಹಾಗೂ ಶಾಸಕರ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ವೈ ಮೃತರ ಕುಟುಂಬಕ್ಕೆ ನೀಡಬೇಕಾದ ಪರಿಹಾರ ಮೊತ್ತವನ್ನು ತಡೆ ಹಿಡಿದಿದ್ದಾರೆ. ಮೃತಪಟ್ಟ ಯುವಕರು ಗಲಭೆಯಲ್ಲಿ ಭಾಗಿಯಾಗಿದ್ದಾರಾ ಎಂಬ ಕುರಿತಾಗಿ ತನಿಖೆ ನಡೆಸಿದ ಬಳಿಕ ಪರಿಹಾರ ನೀಡಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಒಂದು ವೇಳೆ ಮೃತಪಟ್ಟವರು ಅಪರಾಧಿಗಳು ಎಂದು ರುಜುವಾತಾದರೆ ಪರಿಹಾರ ನೀಡಿದ್ದು ತಪ್ಪಾಗುತ್ತದೆ. ಈ ಕಾರಣದಿಂದಾಗಿ ನೀಡಲಾಗಿದ್ದ ಪರಿಹಾರವನ್ನು ತಡೆಹಿಡಿಯಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…