ಉಳ್ಳಾಲ : ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ಧರೆ ಕುಸಿದು ಬಿದ್ದಿತ್ತು. ಶುಕ್ರವಾರ ಮುಂಜಾನೆ ಸುಮಾರು 4 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ವೇಳೆ ಮನೆ ಯಜಮಾನ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ, ಪುತ್ರ ಸೀತಾರಾಮ ಮತ್ತು ಅವರ ಪತ್ನಿ ಅಶ್ವಿನಿ ಮಕ್ಕಳಾದ ಆರುಷ್, ಆರ್ಯನ್ ಮಲಗಿದ್ದರು. ಸೀತಾರಾಮ ಅವರು ಮನೆಯಿಂದ ಹೊರಬರಲು ಯಶಸ್ವಿಯಾಗಿದ್ದಾರೆ. ಪ್ರೇಮಾ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಮೃತದೇಹವೂ ಮಣ್ಣಿನಡಿಯಲ್ಲೇ ಇದೆ. ಕಾಂತಪ್ಪ ಪೂಜಾರಿ ಅವರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.
ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54 ವ) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್, ಎರಡು ವರ್ಷ ಪ್ರಾಯದ ಆರುಷ್ (2 ವರ್ಷ) ಮೃತಪಟ್ಟಿದ್ದಾರೆ. ಆರುಷ್ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಎನ್ ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಪ್ರೇಮ ಅವರ ಮೃತದೇಹವನ್ನು ಹುಡುಕಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…