ಮಂಗಳೂರು: ಗುತ್ತಿಗೆ ಆಧಾರದಲ್ಲಿ KSRTC ಬಸ್ ಚಾಲಕರ ನೇರ ನೇಮಕಾತಿ ; ದ.ಕ. ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರ ನೇರ ನೇಮಕಾತಿ ..

ದ.ಕ. ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಮಂಗಳೂರು: ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಸಲ್ಲಿಸಬೇಕಾದ ದಾಖಲೆಗಳು:

ಆಧಾರ್ ಕಾರ್ಡ್
ವಾಹನ ಚಾಲನಾ ಪರವಾಣಿಗೆ ಪತ್ರ
ಭಾರೀ ಗಾತ್ರದ ವಾಹನ ಚಾಲನೆ ಅನುಜ್ಞಾ ಪತ್ರ
4 ಪಾಸ್ ಪೋರ್ಟ್ ಫೋಟೊ
7ನೇ ತರಗತಿ ಮೇಲ್ಪಟ್ಟ ತೇರ್ಗಡೆಯಾದ ಅಂಕಪಟ್ಟಿ

ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ  ಮಳೆ ಸಾಧ್ಯತೆ – Vishwanews24

Leave a Reply