ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯುಳ್ಳ 11 ಮಂದಿಯನ್ನು 6 ತಿಂಗಳ ಕಾಲ ಗಡಿಪಾರು ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಅವರು ವಿಚಾರಣೆ ಕೈಗೊಂಡಿದ್ದರು.
ಅದರಂತೆ ಅಪರಾಧ ಪ್ರವೃತ್ತಿವುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರಕಾರಿಯಾದ ದ.ಕ.ಜಿಲ್ಲೆಯ 11 ಜನರನ್ನು ದ.ಕ.ಜಿಲ್ಲೆಯಿಂದ ಮಾರ್ಚ್ 6 ರಿಂದ ಸೆಪ್ಟೆಂಬರ್ 6 ರ ವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳ್ತಮಜಲು ನಿವಾಸಿ ನಜೀರ್ ಕುಣಿಗಲ್, ಬಾಳ್ತಿಲ ನಿವಾಸಿ ಇಬ್ರಾಹಿಂ ಖಲೀಲ್,ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಜಯರಾಜ್ ರೈ,ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೋಲೀಸ್ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್, ಉಪ್ಪಿನಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಅಬೂಬಕ್ಕರ್, ಉಬೈದ್ ಬಿಎಸ್. ತಸ್ಲೀಂ, ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಅವರನ್ನು ಗಡಿಪಾರು ಮಾಡಿ ಎಂದು ಆದೇಶ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…