ದಕ್ಷಿಣ ಕನ್ನಡ: ಮಂಗಳೂರು ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಇದನ್ನ ಮಾಡಿರುವುದು ಯಾರೇ ಆದರೂ, ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಭಾನುವವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದಿರುವವರನ್ನು ಪತ್ತೆ ಹಚ್ಚುವ ಜವಬ್ದಾರಿ ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೆಲಿದೆ. ಜೊತೆಗೆ ಈ ಗೋಡೆಬರಹ ಬರೆದವರಿಗೆ ಬೆಂಬಲವಾಗಿರುವರನ್ನು ಕೂಡ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ ಎಂದು ಯುಟಿ ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡ್ತಿದೆ..? ಎಂದು ಗಂಭೀರವಾಗಿ ಪ್ರಶ್ನೆ ಮಾಡಿರುವ ಶಾಸಕ ಖಾದರ್, ಜಿಲ್ಲೆಯಲ್ಲಿ ಇವತ್ತು ಕಾನೂನಿಗೆ ಹೆದರದ ಪರಿಸ್ಥಿತಿ ನಿರ್ಮಾಣವಾಗಿದ್ದು ಗೋಡೆ ಬರಹ, ಇನ್ನಿತರ ವಿಚಾರಗಳು ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ..?ಇದಕ್ಕೆ ಜಿಲ್ಲೆಯ ಎಂಪಿ, ಎಂ.ಎಲ್.ಎ.ಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದ ಖಾದರ್, ಮಂಗಳೂರಿನಲ್ಲಿ ಒಂದು ಬಾರಿಯಲ್ಲದೆ ಮತ್ತೆ ಮತ್ತೆ ಹೀಗ್ಯಾಕೆ ಗೋಡೆ ಬರಹಗಳನ್ನು ಬರೆಯಲಾಗುತ್ತಿದೆ.. ಗೋಡೆ ಬರಹಗಳನ್ನು ಬರೆದವರನ್ನ ಪತ್ತೆ ಹಚ್ಚಿ ಅಂಥವರನ್ನ ಬೇರೆ ದೇಶಕ್ಕೆ ಬಿಟ್ಟು ಬರಬೇಕು. ಅಂಥವರಿಗೆ ನಮ್ಮ ಮಣ್ಣಿನಲ್ಲಿ ಇರಲು ಯಾವುದೇ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು, ಈ ವಿಚಾರದ ಬಗ್ಗೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದ ಖಾದರ್, ಒಂದು ವಾರದ ಒಳಗೆ ಈ ಆರೋಪಿಗಳ ಪತ್ತೆಯಾಗಬೇಕು.ಅದು ಬಿಟ್ಟು 15 ದಿನದ ಒಳಗೆ ಬಂಧನ ಆಗದೇ ಇದ್ರೆ..! ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡ್ತೇವೆ. ಅವರು ಮಾನಸಿಕ ಅಸ್ವಸ್ಥರೇ ಆಗಿರಲಿ, ಅವರನ್ನು ಬಂಧಿಸತಕ್ಕದ್ದು ಇವತ್ತು ಕೋಮಾ ಸ್ಥಿತಿಯಲ್ಲಿ ಇರುವ ರಾಜ್ಯ ಸರ್ಕಾರ ಜವಾಬ್ದಾರಿ ಎಂಬ ಕಿಡಿನುಡಿಗಳನ್ನು ಖಾದರ್ ನುಡಿದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…