Featured

ಮಂಗಳೂರು ಗೋಡೆ ಬರಹ : ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ : ಯುಟಿ ಖಾದರ್ -Vishwanews24

ಮಂಗಳೂರು ಗೋಡೆ ಬರಹ : ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ : ಯುಟಿ ಖಾದರ್ -Vishwanews24

ದಕ್ಷಿಣ ಕನ್ನಡ: ಮಂಗಳೂರು ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಇದನ್ನ ಮಾಡಿರುವುದು ಯಾರೇ ಆದರೂ, ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಭಾನುವವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದಿರುವವರನ್ನು ಪತ್ತೆ ಹಚ್ಚುವ ಜವಬ್ದಾರಿ ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೆಲಿದೆ. ಜೊತೆಗೆ ಈ ಗೋಡೆಬರಹ ಬರೆದವರಿಗೆ ಬೆಂಬಲವಾಗಿರುವರನ್ನು ಕೂಡ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ ಎಂದು ಯುಟಿ ಖಾದರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡ್ತಿದೆ..? ಎಂದು ಗಂಭೀರವಾಗಿ ಪ್ರಶ್ನೆ ಮಾಡಿರುವ ಶಾಸಕ ಖಾದರ್, ಜಿಲ್ಲೆಯಲ್ಲಿ ಇವತ್ತು ಕಾನೂನಿಗೆ ಹೆದರದ ಪರಿಸ್ಥಿತಿ ನಿರ್ಮಾಣವಾಗಿದ್ದು ಗೋಡೆ ಬರಹ, ಇನ್ನಿತರ ವಿಚಾರಗಳು ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ..?ಇದಕ್ಕೆ ಜಿಲ್ಲೆಯ ಎಂಪಿ, ಎಂ.ಎಲ್.ಎ.ಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದ ಖಾದರ್, ಮಂಗಳೂರಿನಲ್ಲಿ ಒಂದು ಬಾರಿಯಲ್ಲದೆ ಮತ್ತೆ ಮತ್ತೆ ಹೀಗ್ಯಾಕೆ ಗೋಡೆ ಬರಹಗಳನ್ನು ಬರೆಯಲಾಗುತ್ತಿದೆ.. ಗೋಡೆ ಬರಹಗಳನ್ನು ಬರೆದವರನ್ನ ಪತ್ತೆ ಹಚ್ಚಿ ಅಂಥವರನ್ನ ಬೇರೆ ದೇಶಕ್ಕೆ ಬಿಟ್ಟು ಬರಬೇಕು. ಅಂಥವರಿಗೆ ನಮ್ಮ ಮಣ್ಣಿನಲ್ಲಿ ಇರಲು ಯಾವುದೇ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು, ಈ ವಿಚಾರದ ಬಗ್ಗೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದ ಖಾದರ್, ಒಂದು ವಾರದ ಒಳಗೆ ಈ ಆರೋಪಿಗಳ ಪತ್ತೆಯಾಗಬೇಕು.ಅದು ಬಿಟ್ಟು 15 ದಿನದ ಒಳಗೆ ಬಂಧನ ಆಗದೇ ಇದ್ರೆ..! ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡ್ತೇವೆ. ಅವರು ಮಾನಸಿಕ ಅಸ್ವಸ್ಥರೇ ಆಗಿರಲಿ, ಅವರನ್ನು ಬಂಧಿಸತಕ್ಕದ್ದು ಇವತ್ತು ಕೋಮಾ ಸ್ಥಿತಿಯಲ್ಲಿ ಇರುವ ರಾಜ್ಯ ಸರ್ಕಾರ ಜವಾಬ್ದಾರಿ ಎಂಬ ಕಿಡಿನುಡಿಗಳನ್ನು ಖಾದರ್ ನುಡಿದಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

51 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago