Featured

ಮಂಗಳೂರು ಗೋಡೆ ಬರಹ : ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ : ಯುಟಿ ಖಾದರ್ -Vishwanews24

ಮಂಗಳೂರು ಗೋಡೆ ಬರಹ : ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ : ಯುಟಿ ಖಾದರ್ -Vishwanews24

ದಕ್ಷಿಣ ಕನ್ನಡ: ಮಂಗಳೂರು ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಇದನ್ನ ಮಾಡಿರುವುದು ಯಾರೇ ಆದರೂ, ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಭಾನುವವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದಿರುವವರನ್ನು ಪತ್ತೆ ಹಚ್ಚುವ ಜವಬ್ದಾರಿ ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೆಲಿದೆ. ಜೊತೆಗೆ ಈ ಗೋಡೆಬರಹ ಬರೆದವರಿಗೆ ಬೆಂಬಲವಾಗಿರುವರನ್ನು ಕೂಡ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ ಎಂದು ಯುಟಿ ಖಾದರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡ್ತಿದೆ..? ಎಂದು ಗಂಭೀರವಾಗಿ ಪ್ರಶ್ನೆ ಮಾಡಿರುವ ಶಾಸಕ ಖಾದರ್, ಜಿಲ್ಲೆಯಲ್ಲಿ ಇವತ್ತು ಕಾನೂನಿಗೆ ಹೆದರದ ಪರಿಸ್ಥಿತಿ ನಿರ್ಮಾಣವಾಗಿದ್ದು ಗೋಡೆ ಬರಹ, ಇನ್ನಿತರ ವಿಚಾರಗಳು ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ..?ಇದಕ್ಕೆ ಜಿಲ್ಲೆಯ ಎಂಪಿ, ಎಂ.ಎಲ್.ಎ.ಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದ ಖಾದರ್, ಮಂಗಳೂರಿನಲ್ಲಿ ಒಂದು ಬಾರಿಯಲ್ಲದೆ ಮತ್ತೆ ಮತ್ತೆ ಹೀಗ್ಯಾಕೆ ಗೋಡೆ ಬರಹಗಳನ್ನು ಬರೆಯಲಾಗುತ್ತಿದೆ.. ಗೋಡೆ ಬರಹಗಳನ್ನು ಬರೆದವರನ್ನ ಪತ್ತೆ ಹಚ್ಚಿ ಅಂಥವರನ್ನ ಬೇರೆ ದೇಶಕ್ಕೆ ಬಿಟ್ಟು ಬರಬೇಕು. ಅಂಥವರಿಗೆ ನಮ್ಮ ಮಣ್ಣಿನಲ್ಲಿ ಇರಲು ಯಾವುದೇ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು, ಈ ವಿಚಾರದ ಬಗ್ಗೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದ ಖಾದರ್, ಒಂದು ವಾರದ ಒಳಗೆ ಈ ಆರೋಪಿಗಳ ಪತ್ತೆಯಾಗಬೇಕು.ಅದು ಬಿಟ್ಟು 15 ದಿನದ ಒಳಗೆ ಬಂಧನ ಆಗದೇ ಇದ್ರೆ..! ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡ್ತೇವೆ. ಅವರು ಮಾನಸಿಕ ಅಸ್ವಸ್ಥರೇ ಆಗಿರಲಿ, ಅವರನ್ನು ಬಂಧಿಸತಕ್ಕದ್ದು ಇವತ್ತು ಕೋಮಾ ಸ್ಥಿತಿಯಲ್ಲಿ ಇರುವ ರಾಜ್ಯ ಸರ್ಕಾರ ಜವಾಬ್ದಾರಿ ಎಂಬ ಕಿಡಿನುಡಿಗಳನ್ನು ಖಾದರ್ ನುಡಿದಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

14 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

19 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

19 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

20 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

20 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

20 hours ago