Featured

ಮಂಗಳೂರು : ಗೋಡೆ ಬರಹ ಪ್ರಕರಣ : ಆರೋಪಿಗಳು ಹತ್ತು ದಿನ ಪೊಲೀಸ್‌ ಕಸ್ಟಡಿಗೆ -Vishwanews24

ಮಂಗಳೂರು : ಗೋಡೆ ಬರಹ ಪ್ರಕರಣ : ಆರೋಪಿಗಳು ಹತ್ತು ದಿನ ಪೊಲೀಸ್‌ ಕಸ್ಟಡಿಗೆ -Vishwanews24

ಮಂಗಳೂರು,: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರರ ಪರ ಗೋಡೆಗ ಬರಹಗಳನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಡಿ.9ರ ಬುಧವಾರದಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪೊಲೀಸರ ಮನವಿಯಂತೆ ನ್ಯಾಯಾಲಯವು ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಹತ್ತು ದಿನಗಳ ಅವಧಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ತೀರ್ಥಹಳ್ಳಿ ನಿವಾಸಿಗಳಾದ ಶಾರೀಕ್‌ ಹಾಗೂ ಮಾಝ್‌‌‌ ಮುನೀರ್‌‌ ಎಂದು ತಿಳಿದುಬಂದಿದೆ. ಇಬ್ಬರು ಆರೋಪಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪೊಲೀಸರ ಕೈ ಸೇರದ ಕಾರಣ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಾಗಲಿಲ್ಲ.

ಇಬ್ಬರು ಆರೋಪಿಗಳ ಬಳಿ ಇದ್ದ ಮೊಬೈಲ್‌‌ ಫೋನ್‌ ಹಾಗೂ ಮಾಝ್‌‌ನ ಬಳಿ ಇದ್ದ ಲಾಪ್‌ಟಾಪ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿರುವ ಡೇಟಾವನ್ನು ರಿಟ್ರೈವ್‌ ಮಾಡಲು ತಂತ್ರಜ್ಞರಿಗೆ ನೀಡಿದ್ದಾರೆ. ಲಾಪ್‌‌ಟಾಪ್‌ನಲ್ಲಿರುವ ದಾಖಲೆಗಳು ಪೊಲೀಸರ ತನಿಖೆಗೆ ಹೆಚ್ಚಿನ ಬಲ ನೀಡುವ ಸಾಧ್ಯತೆ ಇದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾರೀಕ್‌ಗೆ ವಿದೇಶದಲ್ಲಿರುವ ಓರ್ವ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವ್ಯಕ್ತಿಯ ಸಲಹೆಯ ಮೇರೆಗೆ ಗೋಡೆ ಬರಹಗಳನ್ನು ಬರೆದಿದ್ದ ಎನ್ನಲಾಗಿದೆ. ಅಲ್ಲದೇ, ಆ ವ್ಯಕ್ತಿಯೊಂದಿಗೆ ಇಂಟರ್‌ನೆಟ್‌‌‌ ಕರೆಗಳ ಮೂಲಕ ಸಂವಹನ ನಡೆಸುತ್ತಿದ್ದು, ಈ ಕೃತ್ಯಕ್ಕೆ ನಿರ್ದೇಶನ ನೀಡಿದ ವ್ಯಕ್ತಿ ಹಾಗೂ ಈ ಘಟನೆಯಲ್ಲಿ ಭಾಗಿಯಾದ ಸದಸ್ಯರು ಪುಣೆಯ ವಾಟ್ಸಾಪ್‌ ಗುಂಪಿನಲ್ಲಿರುವವರು ಎಂಬ ಮಾಹಿತಿಯ ಹಿನ್ನೆಲೆ ಪೊಲೀಸರು ಇನ್ನಷ್ಟು ಹೆಚ್ಚಿನ ತನಿಖೆ ಮಾಡಲು ತೀರ್ಮಾನಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

59 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

24 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

24 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago