ಮಂಗಳೂರು,: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರರ ಪರ ಗೋಡೆಗ ಬರಹಗಳನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಡಿ.9ರ ಬುಧವಾರದಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪೊಲೀಸರ ಮನವಿಯಂತೆ ನ್ಯಾಯಾಲಯವು ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಹತ್ತು ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ತೀರ್ಥಹಳ್ಳಿ ನಿವಾಸಿಗಳಾದ ಶಾರೀಕ್ ಹಾಗೂ ಮಾಝ್ ಮುನೀರ್ ಎಂದು ತಿಳಿದುಬಂದಿದೆ. ಇಬ್ಬರು ಆರೋಪಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪೊಲೀಸರ ಕೈ ಸೇರದ ಕಾರಣ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಾಗಲಿಲ್ಲ.
ಇಬ್ಬರು ಆರೋಪಿಗಳ ಬಳಿ ಇದ್ದ ಮೊಬೈಲ್ ಫೋನ್ ಹಾಗೂ ಮಾಝ್ನ ಬಳಿ ಇದ್ದ ಲಾಪ್ಟಾಪ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿರುವ ಡೇಟಾವನ್ನು ರಿಟ್ರೈವ್ ಮಾಡಲು ತಂತ್ರಜ್ಞರಿಗೆ ನೀಡಿದ್ದಾರೆ. ಲಾಪ್ಟಾಪ್ನಲ್ಲಿರುವ ದಾಖಲೆಗಳು ಪೊಲೀಸರ ತನಿಖೆಗೆ ಹೆಚ್ಚಿನ ಬಲ ನೀಡುವ ಸಾಧ್ಯತೆ ಇದೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾರೀಕ್ಗೆ ವಿದೇಶದಲ್ಲಿರುವ ಓರ್ವ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವ್ಯಕ್ತಿಯ ಸಲಹೆಯ ಮೇರೆಗೆ ಗೋಡೆ ಬರಹಗಳನ್ನು ಬರೆದಿದ್ದ ಎನ್ನಲಾಗಿದೆ. ಅಲ್ಲದೇ, ಆ ವ್ಯಕ್ತಿಯೊಂದಿಗೆ ಇಂಟರ್ನೆಟ್ ಕರೆಗಳ ಮೂಲಕ ಸಂವಹನ ನಡೆಸುತ್ತಿದ್ದು, ಈ ಕೃತ್ಯಕ್ಕೆ ನಿರ್ದೇಶನ ನೀಡಿದ ವ್ಯಕ್ತಿ ಹಾಗೂ ಈ ಘಟನೆಯಲ್ಲಿ ಭಾಗಿಯಾದ ಸದಸ್ಯರು ಪುಣೆಯ ವಾಟ್ಸಾಪ್ ಗುಂಪಿನಲ್ಲಿರುವವರು ಎಂಬ ಮಾಹಿತಿಯ ಹಿನ್ನೆಲೆ ಪೊಲೀಸರು ಇನ್ನಷ್ಟು ಹೆಚ್ಚಿನ ತನಿಖೆ ಮಾಡಲು ತೀರ್ಮಾನಿಸಿದ್ದಾರೆ.
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…