Featured

ಮಂಗಳೂರು ಗೋಡೆ ಮೇಲೆ ಉಗ್ರ ಸಂಘಟನೆ ಪರ  ಬರಹ –  ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಿ : ಐವನ್ ಡಿಸೋಜಾ -Vishwanews24

ಮಂಗಳೂರು ಗೋಡೆ ಮೇಲೆ ಉಗ್ರ ಸಂಘಟನೆ ಪರ  ಬರಹ –  ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಿ : ಐವನ್ ಡಿಸೋಜಾ -Vishwanews24

ಮಂಗಳೂರು: ಬಿಜೈ ಸಮೀಪದ ಅಪಾರ್ಟ್ಮೆಂಟ್‌ವೊ0ದರ ಗೋಡೆ ಮೇಲೆ ಉಗ್ರ ಸಂಘಟನೆಯ ಪರ ಬರಹವನ್ನು ಖಂಡಿಸಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಯುವ ಇಂಟಕ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ವೇಳೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಮಂಗಳೂರು ಬಿಜೈ ಸಮೀಪದ ಅಪಾರ್ಟ್ಮೆಂಟ್‌ವೊ0ದರ ಗೋಡೆ ಮೇಲೆ ಉಗ್ರ ಸಂಘಟನೆಯ ಪರ ಬರಹ ಬರೆದಿರುವ ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಬೇಕು.

ಇದು ದೇಶದ ಭದ್ರತೆಗೆ ಸವಾಲಿನ ಪ್ರಕರಣವಾಗಿದ್ದು, ಈ ರೀತಿ ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ದುಷ್ಟಶಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ. ನಗರದ ಹೃದಯ ಭಾಗದಲ್ಲಿ ಇಷ್ಟೊಂದು ಧೈರ್ಯದಲ್ಲಿ ಈ ಕೃತ್ಯ ನಡೆದಿರುವುದು ಜಿಲ್ಲೆಯ ಪೊಲೀಸ್ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಆದ್ದರಿಂದ ಪೊಲೀಸರು ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ನಗರದಲ್ಲಿ ಮೆರವಣಿಗೆ ನಡೆಸಬೇಕು.

ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ನ್ಯಾಯವಾದಿ ದಿನಕರ ಶೆಟ್ಟಿ, ಇಂಟಕ್ ಮುಖಂಡರಾದ ಮನೋಹರ್ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಸುನೀಲ್ ಶೆಟ್ಟಿ, ಹರೀಶ್, ಪುನೀತ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

5 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

6 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

7 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

8 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

9 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

9 hours ago