Featured

ಮಂಗಳೂರು ಗೋಡೆ ಮೇಲೆ ಉಗ್ರ ಸಂಘಟನೆ ಪರ  ಬರಹ –  ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಿ : ಐವನ್ ಡಿಸೋಜಾ -Vishwanews24

ಮಂಗಳೂರು ಗೋಡೆ ಮೇಲೆ ಉಗ್ರ ಸಂಘಟನೆ ಪರ  ಬರಹ –  ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಿ : ಐವನ್ ಡಿಸೋಜಾ -Vishwanews24

ಮಂಗಳೂರು: ಬಿಜೈ ಸಮೀಪದ ಅಪಾರ್ಟ್ಮೆಂಟ್‌ವೊ0ದರ ಗೋಡೆ ಮೇಲೆ ಉಗ್ರ ಸಂಘಟನೆಯ ಪರ ಬರಹವನ್ನು ಖಂಡಿಸಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಯುವ ಇಂಟಕ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ವೇಳೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಮಂಗಳೂರು ಬಿಜೈ ಸಮೀಪದ ಅಪಾರ್ಟ್ಮೆಂಟ್‌ವೊ0ದರ ಗೋಡೆ ಮೇಲೆ ಉಗ್ರ ಸಂಘಟನೆಯ ಪರ ಬರಹ ಬರೆದಿರುವ ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಬೇಕು.

ಇದು ದೇಶದ ಭದ್ರತೆಗೆ ಸವಾಲಿನ ಪ್ರಕರಣವಾಗಿದ್ದು, ಈ ರೀತಿ ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ದುಷ್ಟಶಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ. ನಗರದ ಹೃದಯ ಭಾಗದಲ್ಲಿ ಇಷ್ಟೊಂದು ಧೈರ್ಯದಲ್ಲಿ ಈ ಕೃತ್ಯ ನಡೆದಿರುವುದು ಜಿಲ್ಲೆಯ ಪೊಲೀಸ್ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಆದ್ದರಿಂದ ಪೊಲೀಸರು ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ನಗರದಲ್ಲಿ ಮೆರವಣಿಗೆ ನಡೆಸಬೇಕು.

ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ನ್ಯಾಯವಾದಿ ದಿನಕರ ಶೆಟ್ಟಿ, ಇಂಟಕ್ ಮುಖಂಡರಾದ ಮನೋಹರ್ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಸುನೀಲ್ ಶೆಟ್ಟಿ, ಹರೀಶ್, ಪುನೀತ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago