ಮಂಗಳೂರು : ಬಜ್ಪೆ ಬಳಿ ಬೈಕ್ ನಲ್ಲಿ ಗೋಮಾಂಸಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ಹಲ್ಲೆ ನಡೆಸಿದ ಆರೋಪಿದ ಮೇಲೆ ಅರೆಸ್ಟ್ ಆಗಿರುವ ಆರೋಪಿಗಳಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿಯೂ ಬಜಪೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಲ್ಲೆಗೊಳಗಾದ ಬಳಿಕ ತಲೆಮರೆಸಿಕೊಂಡಿದ್ದ ಮೂಲರಪಟ್ಣದ ಅಬ್ದುಲ್ ಸತ್ತಾರ್ ಎಂಬಾತನನ್ನು ದಾಖಲೆಗಳಿಲ್ಲದೇ ಗೋಮಾಂಸ ಸಾಗಿಸಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಡಪದವಿನ ಸುಮಿತ್ ಭಂಡಾರಿ (21), ರಜತ್ ನಾಯ್ಕ್ (30) ಹಲ್ಲೆ ನಡೆಸಿದ ಆರೋಪಿಗಳು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಬೈಕನ್ನು ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿದ್ದ ಆರೋಪಿಗಳು ನಾರ್ಲಪದವು ಬಳಿ ವಾಹನವನ್ನು ರಸ್ತೆಗೆ ಅಡ್ಡ ನಿಲ್ಲಿಸಿ, ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಟ್ಟೆಯನ್ನು ಜಗ್ಗಿ ಕಿರುಕುಳ ನೀಡಿದ್ದಾರೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಅದರ ಆಧಾರದಲ್ಲಿ ಆರೋಪಿಗಳಾದ ಸುಮಿತ್ ಭಂಡಾರಿ ಹಾಗೂ ರಜತ್ ನಾಯ್ಕ್ ವಿರುದ್ಧ ಪೊಕ್ಸೊ ಕಾಯ್ದೆಯ ಸೆಕ್ಷನ್ 12 (ಲೈಂಗಿಕ ಕಿರುಕುಳ), ಭಾರತೀಯ ನ್ಯಾಯಾಂಗ ಸಂಹಿತೆಯ ಸೆಕ್ಷನ್ 126 (2) (ತಡೆದು ನಿಲ್ಲಿಸಿದ್ದು), ಸೆಕ್ಷನ್ 115 (2) (ಹಲ್ಲೆ ನಡೆಸಿದ್ದು), ಸೆಕ್ಷನ್ 74 (ಬಾಲಕಿ ಮೇಲೆ ಹಲ್ಲೆ, ಮಾನಭಂಗ ಯತ್ನ), ಸೆಕ್ಷನ್ 75 (1) (ಲೈಂಗಿಕ ಕಿರುಕುಳ), ಸೆಕ್ಷನ್ 351 (ಕ್ರಿಮಿನಲ್ ಬೆದರಿಕೆ) ಹಾಗೂ ಸೆಕ್ಷನ್ 352 (ಶಾಂತಿ ಭಂಗ) ಅಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಬ್ದುಲ್ ಸತ್ತಾರ್ ಬೈಕಿನಲ್ಲಿ 35 ಪೊಟ್ಟಣಗಳಲ್ಲಿ ತುಂಬಿದ್ದ 19 ಕೆ.ಜಿ. ಗೋಮಾಂಸ ಪತ್ತೆಯಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಆರೋಪಿ ಯಾವುದೇ ಬಿಲ್ ಅಥವಾ ದಾಖಲೆಗಳನ್ನು ಒದಗಿಸಿಲ್ಲ. ಅದನ್ನು ಆತ ಎಲ್ಲಿಂದ ತಂದಿದ್ದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…