ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.
ಗೋಲಿಬಾರ್ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ಮ್ಯಾಜಿಸ್ಟ್ರೇಟ್ ತನಿಖಾ ವರದಿ ಹೇಳಿದೆ. ಆ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಂಡಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.
ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.
2019ರ ಡಿಸೆಂಬರ್ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಲಭೆ ಉಂಟಾಗಿತ್ತು. ಈ ವೇಳೆ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…