ಮಂಗಳೂರು : ಗೋವನ್ನು ನಾವು ಕಾಪಾಡಿದರೆ ಗೋವು ನಮ್ಮನ್ನು ಕಾಪಾಡುತ್ತದೆ : ಶ್ರಿ ರಾಘವೇಶ್ವರ ಭಾರತೀ ಸ್ವಾಮೀಜಿ -Vishwanews24

ಮಂಗಳೂರು: ಪರಿಸರ ಉಳಿಯಲು ವನಸಂರಕ್ಷಣೆ ಎಷ್ಟು ಮುಖ್ಯವೋ ಗೋ ಸಂರಕ್ಷಣೆ ಕೂಡ ಅಷ್ಟೇ ಮುಖ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಯತಿವರ್ಯರಾದ ಶ್ರಿ ರಾಘವೇಶ್ವರ ಭಾರತೀ ಸ್ವಾಮೀಜಿ ತಮ್ಮ ಅನುಗ್ರಹ ಭಾಷಣದಲ್ಲಿ ಹೇಳಿದರು.

ಮಂಗಳೂರಿನ ಕುಂಜತ್ತಬೈಲಿನ ಮಾರುತಿ ಬಡಾವಣೆಯಲ್ಲಿ ಪೂಜ್ಯರು ಗೋಸಂರಕ್ಷಣೆ ಬಗ್ಗೆ ಪ್ರವಚನ ನೀಡುತ್ತಿದ್ದರು.

ಗೋವನ್ನು ನಾವು ಕಾಪಾಡಿದರೆ ಗೋವು ನಮ್ಮನ್ನು ಕಾಪಾಡುತ್ತದೆ. ಇಡೀ ಸೃಷ್ಟಿಯೇ ಒಬ್ಬರನ್ನೊಬ್ಬರು ಅನುಸರಿಸಿ ಬಾಳುವುದನ್ನು ಹೇಳಿಕೊಡುತ್ತದೆ. ನಾವು ಸೃಷ್ಟಿಯ ವಿರುದ್ಧ ಹೋಗುತ್ತಿದ್ದೇವೆ. ಇದು ಒಳ್ಳೆಯದಲ್ಲ. ಪ್ರಕೃತಿ, ಪರಿಸರ, ಪ್ರಾಣಿ-ಪಕ್ಷಿಗಳನ್ನು ಈ ರೀತಿ ನಾಶ ಮಾಡುತ್ತ ಹೋದರೆ ನಮ್ಮ ವಿನಾಶವನ್ನು ನಾವೇ ತಂದುಕೊಂಡಂತೆ ಎಂದು ಶ್ರೀಗುರುಗಳು ಹೇಳಿದರು.

ಮನುಕುಲದ ವಿಕಾಸದ ಕಾಲದಿಂದಲೂ ಗೋವು ಮನುಷ್ಯನ ಸಹವರ್ತಿಯಾಗಿ ಬದುಕಿದ ಅತ್ಯಂತ ಸಾಧು ಸ್ವಭಾವದ ಪ್ರಾಣಿ. ದೇವತೆಗಳ ಸಕಲ ಅಂಶಗಳನ್ನೂ ಹೊಂದಿರುವ ಪೂಜನೀಯ ಪ್ರಾಣಿ. ಆಧುನಿಕ ನಾಗರಿಕತೆಯ ಹೆಸರಿನಲ್ಲಿ ಸಾಕ್ಷರ ರಾಕ್ಷಸರಾದ ನಾವು ಅವುಗಳನ್ನು ಕೊಂದು ತಿಂದು ಅವುಗಳ ಸಂತತಿಯನ್ನೇ ನಾಶ ಪಡಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಹಸುಗಳು ಅಳಿದರೆ ಮನುಷ್ಯರೂ ಉಳಿಯುವುದಿಲ್ಲ ಎಂದು ಪೂಜ್ಯ ಶ್ರೀ ರಾಘವೇಶ್ವರ ಭಾರತೀ ಶ್ರೀಪಾದರು ನುಡಿದರು.

 

ಪ್ರಜೆಗಳೆಲ್ಲರೂ ಸರಕಾರದ ಮೇಲೆ ಒಕ್ಕೊರಲ ಒತ್ತಡ ಹಾಕಿ ಗೋ ಸಂರಕ್ಷಣೆ ಮಾಡುವ ಶಪಥ ಹಾಕಬೇಕು ಎಂದು ಪೂಜ್ಯರು ಒತ್ತಾಯಿಸಿದರು.

ಕುಂಜತ್ ಬೈಲ್ ವೃತ್ತದಿಂದ ಮಾರುತಿ ಬಡಾವಣೆಯ ವರೆಗೆ ಸುಮಾರು ಒಂದು ಕಿ. ಮೀ. ದೂರ ಕಲಶ ಹಿಡಿದ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಚೆಂಡೆ ವಾದ್ಯಗಳ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀಗಳವರನ್ನು ತೆರೆದ ವಾಹನದಲ್ಲಿ ವೇದಿಕೆಯ ವರೆಗೆ ಕರೆದೊಯ್ದರು. ಕುಂಜತ್ ಬೈಲ್ ಪರಿಸರದ ಸಾವಿರಾರು ಮಂದಿ ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

31 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago