Featured

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ – Vishwanews24

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ

ಮಂಗಳೂರು: ಗೋವು ಅಕ್ರಮ ವಧೆ ಪ್ರಕರಣವೊಂದರಲ್ಲಿ ಆರೋಪಿಯ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮದನಮೋಹನ್‌ ಸಿ. ಆದೇಶ ಹೊರಡಿಸಿದ್ದಾರೆ.

ಗೋವನ್ನು ಅಕ್ರಮವಾಗಿ ವಧೆ ಮಾಡಲಾಗಿರುವ ಬಗ್ಗೆ ವಧೆ ಮಾಡಲಾದ ಸ್ಥಳದ ಮಾಲಕ ಯಾಕೂಬ್ ಎಂಬಾತನ ಹೆಸರಿನಲ್ಲಿ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020ರ ಕಲಂ 8(4) ಹಾಗೂ 8(5)ದಂತೆ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಠಾಣಾ ಉಪನಿರೀಕ್ಷಕರು ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಕೂಬ್‌ ಹೆಸರಿನಲ್ಲಿ ಅಡ್ಕೂರು ಗ್ರಾಮದ ಅದ್ಯಪಾಡಿಯಲ್ಲಿ ಡೋರ್‌ ನಂ.1-337 (ಸ.ನಂ.33/6)ರ 15 ಸೆಂಟ್ಸ್‌ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ರಾ.ಹೆ ಸೂಚನ ಫಲಕಗಳಿಗೆ  ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ:vishwanes24 –

ಇದರೊಂದಿಗೆ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ವಾಹನ ಹಾಗು ಇತರ ಸೊತ್ತುಗಳನ್ನು ಸಕ್ಷಮ ಪ್ರಾಧಿಕಾರದಿಂದ ಮೌಲ್ಯಮಾಪನ ಮಾಡಿಸಬೇಕು. ಬಳಿಕ ಅದರ ಅಂದಾಜು ಮೌಲ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ದೂರುದಾರರಿಗೆ ನಿರ್ದೇಶನ ನೀಡಲಾಗಿದೆ.

ಈಗಾಗಲೇ 3ನೇ ಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಅದು ಮುಕ್ತಾಯಗೊಂಡ ಬಳಿಕ ಅಂತಿಮ ವರದಿಯನ್ನು ಎಸಿ ಕೋರ್ಟ್‌ಗೆ ಸಲ್ಲಿಸಬೇಕು. ಅಂತಿಮ ಆದೇಶ ಪ್ರತಿ ಕೂಡಾ ಜೊತೆಗಿರಬೇಕು ಎಂದು ಸೂಚಿಸಲಾಗಿದೆ.

ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿ ನಾಪತ್ತೆ, ದೂರು ದಾಖಲು – Vishwanews24

 

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

9 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

10 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

11 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

12 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

12 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

12 hours ago