Featured

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ – Vishwanews24

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ

ಮಂಗಳೂರು: ಗೋವು ಅಕ್ರಮ ವಧೆ ಪ್ರಕರಣವೊಂದರಲ್ಲಿ ಆರೋಪಿಯ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮದನಮೋಹನ್‌ ಸಿ. ಆದೇಶ ಹೊರಡಿಸಿದ್ದಾರೆ.

ಗೋವನ್ನು ಅಕ್ರಮವಾಗಿ ವಧೆ ಮಾಡಲಾಗಿರುವ ಬಗ್ಗೆ ವಧೆ ಮಾಡಲಾದ ಸ್ಥಳದ ಮಾಲಕ ಯಾಕೂಬ್ ಎಂಬಾತನ ಹೆಸರಿನಲ್ಲಿ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020ರ ಕಲಂ 8(4) ಹಾಗೂ 8(5)ದಂತೆ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಠಾಣಾ ಉಪನಿರೀಕ್ಷಕರು ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಕೂಬ್‌ ಹೆಸರಿನಲ್ಲಿ ಅಡ್ಕೂರು ಗ್ರಾಮದ ಅದ್ಯಪಾಡಿಯಲ್ಲಿ ಡೋರ್‌ ನಂ.1-337 (ಸ.ನಂ.33/6)ರ 15 ಸೆಂಟ್ಸ್‌ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ರಾ.ಹೆ ಸೂಚನ ಫಲಕಗಳಿಗೆ  ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ:vishwanes24 –

ಇದರೊಂದಿಗೆ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ವಾಹನ ಹಾಗು ಇತರ ಸೊತ್ತುಗಳನ್ನು ಸಕ್ಷಮ ಪ್ರಾಧಿಕಾರದಿಂದ ಮೌಲ್ಯಮಾಪನ ಮಾಡಿಸಬೇಕು. ಬಳಿಕ ಅದರ ಅಂದಾಜು ಮೌಲ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ದೂರುದಾರರಿಗೆ ನಿರ್ದೇಶನ ನೀಡಲಾಗಿದೆ.

ಈಗಾಗಲೇ 3ನೇ ಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಅದು ಮುಕ್ತಾಯಗೊಂಡ ಬಳಿಕ ಅಂತಿಮ ವರದಿಯನ್ನು ಎಸಿ ಕೋರ್ಟ್‌ಗೆ ಸಲ್ಲಿಸಬೇಕು. ಅಂತಿಮ ಆದೇಶ ಪ್ರತಿ ಕೂಡಾ ಜೊತೆಗಿರಬೇಕು ಎಂದು ಸೂಚಿಸಲಾಗಿದೆ.

ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿ ನಾಪತ್ತೆ, ದೂರು ದಾಖಲು – Vishwanews24

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago