Featured

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ – vishwanews24

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ..

ಜಿಲ್ಲೆಯಿಂದ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ ಗುರಿ: ಶರಣ್ ಪಂಪ್ ವೆಲ್

ಮಂಗಳೂರು: ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕೇಂದ್ರ ಸರಕಾರ ಕಾನೂನು ಜಾರಿಗೆ ತರಬೇಕು, ಗೋ ಮಾತೆಯನ್ನು ರಾಷ್ಟ್ರಮಾತೆಯಾಗಿ ಘೋಷಿಸಬೇಕು ಮತ್ತು ಗೋವಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿ ದೇಶಾದ್ಯಂತ “ಗೋಮಾತೆಯ ಗೌರವದ ಅಭಿಯಾನ”ದ ಮೂರನೇ ಹಂತದ ಅಭಿಯಾನ ವಿವಿಧ ಹಿಂದೂ ಪರ ಸಂಘಟನೆಗಳು ಮತ್ತು ಮಠ ಮಂದಿರಗಳ ಸಹಯೋಗದಲ್ಲಿ ನಡೆಯಲಿದ್ದು, ಕರಾವಳಿ ಜಿಲ್ಲೆಗಳ ಅಭಿ ಯಾನಕ್ಕೆ ಶುಕ್ರವಾರ ನಗರದ ವಿಎಚ್‌ಪಿ ಕಾರ್ಯಾಲಯದಲ್ಲಿ ನಡೆಯಿತು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್ ಪಿ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲೆಯಲ್ಲಿ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ ಗುರಿ ಹೊಂದಲಾಗಿದೆ. ಇದಕ್ಕಾಗಿ 108 ಮಂದಿಯ ಜಿಲ್ಲಾ ಸಮಿತಿ, 21 ಮಂದಿಯ ತಾಲೂಕು ಸಮಿತಿ, 6 ಮಂದಿಯ ಗ್ರಾಮ ಸಮಿತಿ ರಚಿಸಲಾಗಿದೆ. ಗಣೇಶ ಹಬ್ಬದಲ್ಲೂ ಸಹಿ ಸಂಗ್ರಹ ನಡೆಯಲಿದೆ ಎಂದರು.

30 ಕೋಟಿ ಸಹಿ ಸಂಗ್ರಹ
ಮೊದಲ ಹಂತದಲ್ಲಿ ಫೆಬ್ರವರಿಯಲ್ಲಿ ದೇಶದಲ್ಲಿ 5 ಕೋಟಿ ಸಹಿ ಸಂಗ್ರಹಿಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ಜುಲೈಯಲ್ಲಿ ಮುಕ್ತಾಯಗೊಂಡ ಎರಡನೇ ಹಂತದಲ್ಲಿ ಮತ್ತೆ 16 ಕೋಟಿ ಸಹಿ ಸಂಗ್ರಹಿಸಿ ಕೇಂದ್ರ ಸರಕಾರಕ್ಕೆ ತಲುಪಿಸಲಾಗಿದೆ. ಆದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಮೂರನೇ ಹಂತದಲ್ಲಿ 30 ಕೋಟಿ ಸಹಿ ಸಂಗ್ರಹಿಸಿ, ಆಯಾ ರಾಜ್ಯಗಳ ರಾಜಧಾನಿಯಲ್ಲಿ ಬೃಹತ್‌ ಸಮಾವೇಶ ಆಯೋಜಿಸಿ ರಾಜ್ಯ ಪಾಲರ ಮೂಲಕ ಮನವಿ ಸಲ್ಲಿಸಲು ಉದ್ದೇಶಿಸಲಾಗಿದೆ. ಡಿ.17ರಂದು ಬೆಂಗಳೂರಿನಲ್ಲಿ 3 ಲಕ್ಷಕ್ಕೂ ಹೆಚ್ಚು ಗೋ ಪ್ರೇಮಿಗಳು ಸೇರಿ ಸಮಾವೇಶ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ರಾಜಸ್ಥಾನದ ಪುಷ್ಕರ್‌ಶೀತಲ್ ಆಶ್ರಮದ ಗೋಪಾಲಾನಂದ ಸರಸ್ಪತಿ ಜೀ ಮಹಾರಾಜ್ ಈ ಅಭಿಯಾನದ ನೇತೃತ್ವ ವಹಿಸಿದ್ದಾರೆ. ಕೇಂದ್ರ ಸರಕಾರ ಈ ಹಂತದಲ್ಲೂ ಸ್ಪಂದಿಸದಿದ್ದರೆ ಮುಂದಿನ ಫೆಬ್ರವರಿಯಲ್ಲಿ ದಿಲ್ಲಿಯಲ್ಲಿ ಬೃಹತ್ ಸಮಾವೇಶ ನಡೆಸಿ ರಾಷ್ಟ್ರಪತಿಗಳಿಗೆ ನೇರವಾಗಿ ಮನವಿ ಸಲ್ಲಿಸಲಾಗುವುದು
ಎಂದರು.

ಕೊಂಡಾಣ ಕ್ಷೇತ್ರದ ದುರ್ಗಾನಂದ ಸ್ವಾಮೀಜಿ, ಪ್ರಮುಖರಾದ ಪುರುಷೋ ತಮ್, ಶಿವಾನಂದ ಮೆಂಡನ್, ಆಶೋಕ್ ಇಳಂತಿಲ, ಉದಯ ಶಂಕರ್, ಗಜೇಂದ್ರ, ರಮೇಶ್ ಭಟ್ ಸರವು, ಗೋಪಾಲ ಕುತ್ತಾರ್, ಭರತ್ ಮಂಜನಾಡಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ :  ಸೆ. 16 ರಂದು ನೇರ ಸಂದರ್ಶನ – vishwanews24

ಉಡುಪಿ :  ಸೆ. 16 ರಂದು ನೇರ ಸಂದರ್ಶನ ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್…

8 minutes ago

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಕಿನ್ನಿಮುಲ್ಕಿ ವೇಗಸ್ ಟೌನ್‌ಶಿಪ್‌ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು…

16 minutes ago

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ – vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ಉಡುಪಿ : ಮಣ್ಣಿನಿಂದ…

19 minutes ago

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ – vishwanews24

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ.14, 16 ಮತ್ತು 18ರಂದು ಮೂರು ದಿನ ಮದ್ಯ ಮಾರಾಟ ನಿಷೇಧ ಉಡುಪಿ: ಶಾಂತಿಯುತ…

24 minutes ago

ಗಣೇಶ ಹಬ್ಬದ ಹಿನ್ನೆಲೆ : ಸೆ. 14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ – vishwanews24

ಗೌರಿ - ಗಣೇಶ ಹಬ್ಬದ ಹಿನ್ನೆಲೆ  : ಸೆ.14ರಂದು ಮುಳ್ಳಯ್ಯನಗಿರಿ ಸೇರಿ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಚಿಕ್ಕಮಗಳೂರು: ಗೌರಿ-ಗಣೇಶ…

32 minutes ago

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ 18 ಕೋ. ರೂ. ಅನುದಾನ ಬಿಡುಗಡೆ – vishwanews24

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ ಕಾರ್ಕಳ: ಕರಾವಳಿ…

42 minutes ago