ಮಂಗಳೂರು: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು https://india postgdsonline.gov.in ಮೂಲಕ ಫೆ. 16ರ ಮೊದಲು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 05.06.2022ಕ್ಕೆ ಅನ್ವಯವಾಗುವಂತೆ 18ರಿಂದ 40 ವರ್ಷದ ವಯೋ ಮಿತಿಯೊಳಗಿರಬೇಕು. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ, ಒಬಿಸಿ ಅಂದರೆ ಇತರ ಹಿಂದುಳಿದ ವರ್ಗದವರಿಗೆ 3 ವರ್ಷದ ವಿನಾಯಿತಿ ಅನ್ವಯಿಸುತ್ತದೆ. ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸಂಬಂಧ ಪಟ್ಟ ಅಂಗವಿಕಲರಿಗೆ ಒಟ್ಟು 13 ವರ್ಷ ಹಾಗೂ ಪರಿಶಿಷ್ಟ ಜಾತಿ / ವರ್ಗಗಳಿಗೆ ಸಂಬಂಧಪಟ್ಟ ಅಂಗವಿಕಲರಿಗೆ 15 ವರ್ಷಗಳ ಸಡಿಲಿಕೆ ಇರುತ್ತದೆ.
ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10ನೇ ತರಗತಿಯಲ್ಲಿ ಅಧ್ಯಯನ ಮಾಡಿರಬೇಕು. ಕಾಸರ ಗೋಡು ಜಿಲ್ಲೆಯಲ್ಲಿ ಕನ್ನಡ ಒಂದು ವಿಷಯ ವಾಗಿ ಅಧ್ಯಯನ ನಡೆಸಿ ದವರೂ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಳು https://indiapost.gov.in ಅಥವಾ https://indiapostgdsonline.gov.in ನಲ್ಲಿ ಲಭ್ಯವಿವೆ ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…