Featured

ಮಂಗಳೂರು: ಗ್ರಾ. ಪಂ. ಚುನಾವಣೆ ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ : ಇವಿಎಂ ಬಳಕೆಯಿಲ್ಲ : ಜಿಲ್ಲಾಧಿಕಾರಿ ಡಾ.ರಾಜೇಂದ್ರ -Vishwanews24

ಮಂಗಳೂರು: ಗ್ರಾ. ಪಂ. ಚುನಾವಣೆ ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ : ಇವಿಎಂ ಬಳಕೆಯಿಲ್ಲ : ಜಿಲ್ಲಾಧಿಕಾರಿ ಡಾ.ರಾಜೇಂದ್ರ -Vishwanews24

ಮಂಗಳೂರು,: ದ.ಕ.ಜಿಲ್ಲೆಯ 220 ಗ್ರಾಪಂಗಳ‌ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ, ಇವಿಎಂ ಬಳಕೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ‌ ತಿಳಿಸಿದರು.

ತನ್ನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ ಎಂದರು.

ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆಗೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು‌ ಅಳವಡಿಸಲಾಗುವುದು ಎಂದು ಡಿಸಿ ಹೇಳಿದರು.

ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ. ಅಲ್ಲದೆ 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗುವುದು. ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿದಂತೆ ‌ಸಹಾಯಕ ಆಯುಕ್ತರು‌ ಮತ್ತು ತಹಶಿಲ್ದಾರರಿಗೆ ಜವಾಬ್ದಾರಿ ವಹಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ಜರುಗಿಸಲಾಗುವುದು, ಅಲ್ಲದೆ ಮತಗಟ್ಟೆಗಳ ಸಂಖ್ಯೆಯನ್ನೂ‌ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ‌ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago