Featured

ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಬೆಂಕಿ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಬೆಂಕಿ; ಚಾಲಕ ಪ್ರಾಣಾಪಾಯದಿಂದ ಪಾರು

ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಕೋಟೆಕಾರಿನ ಅಡ್ಕ ಎಂಬಲ್ಲಿ ಗುರುವಾರ ಸಂಭವಿಸಿದೆ.

ತಲಪಾಡಿ ನಿವಾಸಿ ರಿಯಾಜ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್‌ನಿಂದ ರಿಪೇರಿ ಮುಗಿದಿದ್ದ ತಮ್ಮ ವ್ಯಾನ್ ಅನ್ನು ಪಡೆದುಕೊಂಡು ಬರುತ್ತಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿ ತಲಪಾಡಿಯತ್ತ ತೆರಳುತ್ತಿದ್ದಾಗ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಆದರೆ, ವಾಹನಕ್ಕೆ ಬೆಂಕಿ ತಗುಲಿರುವುದು ರಿಯಾಜ್ ಅವರ ಗಮನಕ್ಕೆ ಬಂದಿರಲಿಲ್ಲ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಬ್ಬ ವಾಹನ ಸವಾರರು ಬೆಂಕಿ ಕಾಣಿಸಿಕೊಂಡ ಬಗ್ಗೆ ರಿಯಾಜ್ ಅವರನ್ನು ಎಚ್ಚರಿಸಿದ್ದಾರೆ.

ಇದನ್ನೂ ಓದಿ: 

ಕೂಡಲೇ ರಿಯಾಜ್ ಅವರು ಹೈವೇ ಪಕ್ಕದಲ್ಲಿ ವಾಹನ ನಿಲ್ಲಿಸಿ ಹೊರಬಂದಿದ್ದಾರೆ. ಅವರು ವಾಹನದಿಂದ ಇಳಿಯುತ್ತಿದ್ದಂತೆಯೇ ಇಡೀ ವ್ಯಾನ್ ಬೆಂಕಿಗೆ ತುತ್ತಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

44 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago