ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಮಹಿಳೆಯ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ,ಮಿಡಿಗೇಶಿ,ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹಿಳೆ ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಮಹಿಳೆಯೂ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವರ ನಿಖರ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಎಸ್.ಐ.ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…