ಮಂಗಳೂರು: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರೋಗಿ ಮೃತಪಟ್ಟು ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಸೆ. 25 ರಂದು ಬುಧವಾರ ಮುಂಜಾನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ.
ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ.
ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ, ರಮೇಶ್ ರೈ ಎಂಬವರು ತನ್ನ ಕಾರಿನಲ್ಲಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾಸಪ್ಪ ರೈ ಅವರನ್ನು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಇನ್ನೋವಾ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಮುಂಜಾನೆ 4 ಗಂಟೆ ವೇಳೆಗೆ ಆಂಬುಲೆನ್ಸ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿದ್ದ ರೋಗಿ ದಾಸಪ್ಪ ರೈ ಸ್ಥಳದಲ್ಲೇ ಮೃತಪಟ್ಟಿದ್ದು ಅವರ ಪತ್ನಿ ನಳಿನಿ ರೈ ಪುತ್ರ ಹರ್ಷಿತ್(33) ಹಾಗೂ ಸಂಬಂಧಿಕ ಯುವಕ ಮನೀಷ್(24)ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…