Featured

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬ್ಯುಲೆನ್ಸ್ ; ರೋಗಿ ಮೃತ್ಯು – vishwanews24

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬ್ಯುಲೆನ್ಸ್ – ರೋಗಿ ಮೃತ್ಯು

ಮಂಗಳೂರು: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರೋಗಿ ಮೃತಪಟ್ಟು ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಸೆ. 25 ರಂದು ಬುಧವಾರ ಮುಂಜಾನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ.

ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ.

ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ, ರಮೇಶ್ ರೈ ಎಂಬವರು ತನ್ನ ಕಾರಿನಲ್ಲಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾಸಪ್ಪ ರೈ ಅವರನ್ನು ಮಂಗಳೂರಿನ ಫಸ್ಟ್‌ ನ್ಯೂರೋ ಆಸ್ಪತ್ರೆಗೆ ಇನ್ನೋವಾ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಮುಂಜಾನೆ 4 ಗಂಟೆ ವೇಳೆಗೆ ಆಂಬುಲೆನ್ಸ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್‌ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ಆಂಬುಲೆನ್ಸ್‌ ನಲ್ಲಿದ್ದ ರೋಗಿ ದಾಸಪ್ಪ ರೈ ಸ್ಥಳದಲ್ಲೇ ಮೃತಪಟ್ಟಿದ್ದು ಅವರ ಪತ್ನಿ ನಳಿನಿ ರೈ ಪುತ್ರ ಹರ್ಷಿತ್(33) ಹಾಗೂ ಸಂಬಂಧಿಕ ಯುವಕ ಮನೀಷ್(24)ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

46 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

56 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago