ಮಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಎಚ್ಚರಿಕೆ ನೀಡಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಲ್ಲಿ ಯಾವುದೇ ಧರ್ಮಗಳ ಧಾರ್ಮಿಕ ಆಚರಣೆಗಳಿಗೂ ನೀತಿ ಸಂಹಿತೆ ಅನ್ವಯವಾಗದು. ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಗ್ಸ್ ಹಾಕಬೇಕಾದರೆ ಸ್ಥಳೀಯ ಚುನಾವಣಾಧಿಕಾರಿ ಅನುಮತಿ ಪಡೆಯಬೇಕಾಗುತ್ತದೆ ಎಂದರು.
ಇದೇ ವೇಳೆ ರಾಜಕೀಯ ಪಕ್ಷಗಳು ಚಮ್ಮ ಚುನಾವಣಾ ಪ್ರಚಾರಕ್ಕಾಗಿ ಸ್ಥಳ, ವೇದಿಕೆ ಅಥವಾ ತಾರಾ ಪ್ರಚಾರಕರನ್ನು ಕರೆಸಲು ಬಳಸುವ ಹೆಲಿಪ್ಯಾಡ್ಗಳ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ನೀಡಲಾಗಿದೆ. ಪಕ್ಷಗಳು ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸಿ ಸೂಕ್ತ ಅನುಮತಿ ಪಡೆಯಬೇಕಾಗುತ್ತದೆ. ‘ಸುವಿಧಾ’ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮದುವೆ ಇನ್ನಿತರ ಸಮಾರಂಭಗಳನ್ನು ನಡೆಸಲು ಯಾವುದೇ ನಿರ್ಬಂಧವಿಲ್ಲ. ಆದರೆ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು.
ದೂರು ನೀಡಲು ಸಿ- ವಿಜಿಲ್ ಮೊಬೈಲ್ ಆ್ಯಪ್: ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು -ಟೋ ಹಾಗೂ ವೀಡಿಯೋ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ತಿಳಿಸಿದರು.
ಗೋಷ್ಠಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ, ಮಂಗಳೂರು ಪೊಲೀಸ್ ಆಯುಕ್ತ ಕುಲ್ದೀಪ್ ಕುಮಾರ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ಎಚ್. ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…