Featured

ಮಂಗಳೂರು : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ – ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ  ಯಾವುದೇ ನಿರ್ಬಂಧ ಇಲ್ಲ : ದ.ಕ. ಜಿಲ್ಲಾಧಿಕಾರಿ  – Vishwanews24

ಮಂಗಳೂರು : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ – ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ  ಯಾವುದೇ ನಿರ್ಬಂಧ ಇಲ್ಲ : ದ.ಕ. ಜಿಲ್ಲಾಧಿಕಾರಿ

ಮಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಎಚ್ಚರಿಕೆ ನೀಡಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಲ್ಲಿ ಯಾವುದೇ ಧರ್ಮಗಳ ಧಾರ್ಮಿಕ ಆಚರಣೆಗಳಿಗೂ ನೀತಿ ಸಂಹಿತೆ ಅನ್ವಯವಾಗದು. ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಗ್ಸ್ ಹಾಕಬೇಕಾದರೆ ಸ್ಥಳೀಯ ಚುನಾವಣಾಧಿಕಾರಿ ಅನುಮತಿ ಪಡೆಯಬೇಕಾಗುತ್ತದೆ ಎಂದರು.

ಇದೇ ವೇಳೆ ರಾಜಕೀಯ ಪಕ್ಷಗಳು ಚಮ್ಮ ಚುನಾವಣಾ ಪ್ರಚಾರಕ್ಕಾಗಿ ಸ್ಥಳ, ವೇದಿಕೆ ಅಥವಾ ತಾರಾ ಪ್ರಚಾರಕರನ್ನು ಕರೆಸಲು ಬಳಸುವ ಹೆಲಿಪ್ಯಾಡ್‌ಗಳ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ನೀಡಲಾಗಿದೆ. ಪಕ್ಷಗಳು ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸಿ ಸೂಕ್ತ ಅನುಮತಿ ಪಡೆಯಬೇಕಾಗುತ್ತದೆ. ‘ಸುವಿಧಾ’ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮದುವೆ ಇನ್ನಿತರ ಸಮಾರಂಭಗಳನ್ನು ನಡೆಸಲು ಯಾವುದೇ ನಿರ್ಬಂಧವಿಲ್ಲ. ಆದರೆ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು.

ದೂರು ನೀಡಲು ಸಿ- ವಿಜಿಲ್ ಮೊಬೈಲ್ ಆ್ಯಪ್: ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು -ಟೋ ಹಾಗೂ ವೀಡಿಯೋ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ತಿಳಿಸಿದರು.

ಗೋಷ್ಠಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ, ಮಂಗಳೂರು ಪೊಲೀಸ್ ಆಯುಕ್ತ ಕುಲ್‌ದೀಪ್ ಕುಮಾರ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ಎಚ್. ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

9 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

10 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

10 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

10 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

11 hours ago