ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಗೊಂಡಿದೆ. ಇದರಿಂದ ಕರಾವಳಿ ಭಾಗದಲ್ಲಿ ತರಾತುರಿಯಲ್ಲಿ ನಡೆಯುತ್ತಿದ್ದ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ, ಹಕ್ಕುಪತ್ರ ವಿತರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಿಗೆ ಬುಧವಾರದಿಂದಲೇ ಬ್ರೇಕ್ ಹಾಕಲಾಗಿದೆ.
ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ ವಿತರಣೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಿಲ್ಲಿಸಲಾಗಿದೆ. ಜನಪ್ರತಿನಿಧಿಗಳ ಸಾಧನೆ ಸಂಬಂಧಿ ಪ್ರದರ್ಶನಗಳು, ಪೋಸ್ಟರ್, ಬ್ಯಾನರ್, ಕಟೌಟ್ಗಳ ತೆರವು ಕಾರ್ಯ ಕೂಡಾ ಆರಂಭಗೊಂಡಿದೆ.
ಇನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಾಸಕರು, ಸಂಸದರ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ. ಸರ್ಕಾರಿ ವಾಹನಗಳಲ್ಲಿ ಓಡಾಡುತ್ತಿದ್ದ ಜನಪ್ರತಿನಿಧಿಗಳು ಸರ್ಕಾರಿ ಕಾರು ತ್ಯಜಿಸಿ ಖಾಸಗಿ ವಾಹನಗಳಲ್ಲಿ ಓಡಾಡುತ್ತಿದ್ದಾರೆ. ಇನ್ನು ಕಾರಿಗೆ ಅಂಟಿಸಲಾಗಿರುವ ಎಂಎಲ್ಎ ಬೋರ್ಡ್ಗಳನ್ನೂ ಶಾಸಕರು ತೆರವು ಮಾಡಿದ್ದಾರೆ.
ನೀತಿ ಸಂಹಿತೆಯ ಪರಿಣಾಮಕಾರಿ ಜಾರಿಗಾಗಿ ಪೊಲೀಸರು ಎಲ್ಲೆಡೆ ಕಣ್ಗಾವಲು ಇರಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಸಹಿತ ಹಲವು ತಂಡಗಳನ್ನು ರಚಿಸಲಾಗಿದ್ದು, ವಾಹನಗಳ ತಪಾಸಣೆ ಸಹಿತ ಚುನಾವಣೆ ಅಕ್ರಮ ಉಂಟಾಗದಂತೆ ಈ ತಂಡಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಮೇ 21ರವರೆಗೆ ಯಾವುದೇ ಆಯುಧಗಳನ್ನು ಒಯ್ಯುವುದಕ್ಕೆ ಸಂಪೂರ್ಣ ನಿಷೇಧವಿದೆ. ಆಯುಧ ಪರವಾನಿಗೆಗಳನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಲಾಗಿದೆ. ಪರವಾನಿಗೆ ಪಡೆದ ಶಸ್ತ್ರಾಸ್ತ್ರಗಳನ್ನು ಎ. 4ರೊಳಗೆ ಪೊಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಆಯುಧ ವಿತರಕರಲ್ಲಿ ಠೇವಣಿ ಇಡಬೇಕು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸೂಚಿಸಿದ್ದಾರೆ. ಒಂದು ವೇಳೆ ಆತ್ಮ ರಕ್ಷಣೆ ಮತ್ತು ಕೃಷಿ ರಕ್ಷಣೆ ಉದ್ದೇಶಕ್ಕೆ ಆಯುಧ ಅನಿವಾರ್ಯವಾಗಿದ್ದಲ್ಲಿ ಪರವಾನಿಗೆ ಅಮಾನತಿನಿಂದ ವಿನಾಯಿತಿ ಪಡೆಯಲು ಎಪ್ರಿಲ್ 4ರೊಳಗೆ ಅರ್ಜಿ ಸಲ್ಲಿಸಬೇಕು ಎಂದವರು ವಿವರಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…