ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು.
ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…