Featured

ಮಂಗಳೂರು : ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ, ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು : ಶರಣ್ ಪಂಪ್‍ವೆಲ್ – vishwanews24

ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ…

ಚೈತ್ರಾ  ನಮ್ಮ ಸಂಘಟನೆಯವರಲ್ಲ, ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು : ಶರಣ್ ಪಂಪ್‍ವೆಲ್..

ಮಂಗಳೂರು: ಚೈತ್ರಾ ಕುಂದಾಪುರ ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್  ಹೇಳಿದ್ದಾರೆ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು.

ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡೋದಿಲ್ಲ ಎಂದು ತಿಳಿಸಿದರು.

ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದ್ದು, ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ಚಾಲನೆ ಸಿಗಲಿದೆ. ಅಕ್ಟೋಬರ್ 10 ರಂದು ಉಡುಪಿಯಲ್ಲಿ ಸಮಾರೋಪ ನಡೆಯಲಿದೆ. 2 ಸಾವಿರ ಇರುವ ಬಜರಂಗದಳ ಘಟಕವನ್ನು 5 ಸಾವಿರ ಮಾಡೋ ಗುರಿ ಇದಾಗಿದೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಜೊತೆಗೆ ವಿವಿಧ ಉದ್ದೇಶದಿಂದ ಈ ರಥಯಾತ್ರೆ ಕೈಗೊಳ್ಳಲಾಗಿದೆ ಎಂದರು.

Vishwa News 24

Recent Posts

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

1 minute ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

18 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

41 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

22 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

22 hours ago