ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಮಂಗಳೂರು ವಿಭಾಗವು, ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಿಂದ ನಗರ ಬಸ್ ಸೇವೆಗಳನ್ನು ಪ್ರಾರಂಭಿಸಿದ್ದು, ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ನಗರದ ವಿವಿಧ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೈಲು ನಿಲ್ದಾಣದಿಂದ ಸುಗಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ಮಂಗಳೂರು-3 ಘಟಕವು ಈ ಸೇವೆಯನ್ನು ಆರಂಭಿಸಿದೆ.
ಬಸ್ಸುಗಳ ವೇಳಾಪಟ್ಟಿ ಇಂತಿದೆ:
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕಟೀಲಿಗೆ:
ಬಸ್ ಬೆಳಗ್ಗೆ 6.55 ಮತ್ತು 10.45ಕ್ಕೆ ಹೊರಡುತ್ತವೆ. ಈ ಬಸ್ ಕೂಳೂರು, ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ, ಶಿಬರೂರು ಮತ್ತು ಬಲವಿನಗುಡ್ಡೆ ಮಾರ್ಗವಾಗಿ ಸಂಚರಿಸುತ್ತವೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬೊಕ್ಕಪಟ್ಣಕ್ಕೆ:
ಬಸ್ಸುಗಳು ಬೆಳಗ್ಗೆ 8.45, 10.15, 11.45, ಮಧ್ಯಾಹ್ನ 1.30, 3.20, ಸಂಜೆ 5.00 ಮತ್ತು 6.30ಕ್ಕೆ ಲಭ್ಯವಿವೆ. ಇವು ಕಂಕನಾಡಿ, ಜ್ಯೋತಿ, ಪಿವಿಎಸ್, ಲಾಲ್ಬಾಗ್, ಸುಲ್ತಾನ್ ಬತ್ತೇರಿ, ಅಮೃತ ವಿದ್ಯಾಲಯ ಮತ್ತು ಬೋಳಾರ ಮಾರ್ಗವಾಗಿ ಸಂಚರಿಸುತ್ತವೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಸ್ಟೇಟ್ ಬ್ಯಾಂಕ್ಗೆ:
ಬಸ್ಸುಗಳು ಮಧ್ಯಾಹ್ನ 1.00, 1.25, 2.40, 3.00 ಮತ್ತು ಸಂಜೆ 5.00 ಗಂಟೆಗೆ ಕಾರ್ಯನಿರ್ವಹಿಸುತ್ತವೆ. ಈ ಬಸ್ಸುಗಳು ಪಡಿಲ್, ಮರೋಳಿ, ನಂತೂರು, ಕದ್ರಿ ಮತ್ತು ಜ್ಯೋತಿ ಮಾರ್ಗವಾಗಿ ಸಂಚರಿಸುತ್ತವೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೊಡಿಕಲ್ಗೆ:
ಬಸ್ಸುಗಳು ಬೆಳಗ್ಗೆ 8.00, 9.00, 9.50, 11.00, ಮಧ್ಯಾಹ್ನ 12.15, 2.30 ಮತ್ತು 3.30ಕ್ಕೆ ಲಭ್ಯವಿವೆ. ಇವು ಪಡೀಲ್, ಮರೋಳಿ, ಕಂಕನಾಡಿ ಮಾರ್ಕೆಟ್, ಮಲ್ಲಿಕಟ್ಟೆ, ಕೆಪಿಟಿ, ಲಾಲ್ಬಾಗ್, ಉರ್ವ ಸ್ಟೋರ್ ಮತ್ತು ಕೊಟ್ಟಾರ ಮಾರ್ಗವಾಗಿ ಸಂಚರಿಸುತ್ತವೆ.
ಈ ಹೊಸ ಸಾರಿಗೆ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…