Featured

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ – vishwanews24

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗವು, ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಿಂದ ನಗರ ಬಸ್ ಸೇವೆಗಳನ್ನು ಪ್ರಾರಂಭಿಸಿದ್ದು, ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ನಗರದ ವಿವಿಧ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೈಲು ನಿಲ್ದಾಣದಿಂದ ಸುಗಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಮಂಗಳೂರು-3 ಘಟಕವು ಈ ಸೇವೆಯನ್ನು ಆರಂಭಿಸಿದೆ.

ಬಸ್ಸುಗಳ ವೇಳಾಪಟ್ಟಿ ಇಂತಿದೆ:
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕಟೀಲಿಗೆ:
ಬಸ್ ಬೆಳಗ್ಗೆ 6.55 ಮತ್ತು 10.45ಕ್ಕೆ ಹೊರಡುತ್ತವೆ. ಈ ಬಸ್ ಕೂಳೂರು, ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ, ಶಿಬರೂರು ಮತ್ತು ಬಲವಿನಗುಡ್ಡೆ ಮಾರ್ಗವಾಗಿ ಸಂಚರಿಸುತ್ತವೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬೊಕ್ಕಪಟ್ಣಕ್ಕೆ:
ಬಸ್ಸುಗಳು ಬೆಳಗ್ಗೆ 8.45, 10.15, 11.45, ಮಧ್ಯಾಹ್ನ 1.30, 3.20, ಸಂಜೆ 5.00 ಮತ್ತು 6.30ಕ್ಕೆ ಲಭ್ಯವಿವೆ. ಇವು ಕಂಕನಾಡಿ, ಜ್ಯೋತಿ, ಪಿವಿಎಸ್, ಲಾಲ್‌ಬಾಗ್, ಸುಲ್ತಾನ್ ಬತ್ತೇರಿ, ಅಮೃತ ವಿದ್ಯಾಲಯ ಮತ್ತು ಬೋಳಾರ ಮಾರ್ಗವಾಗಿ ಸಂಚರಿಸುತ್ತವೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಸ್ಟೇಟ್ ಬ್ಯಾಂಕ್‌ಗೆ:
ಬಸ್ಸುಗಳು ಮಧ್ಯಾಹ್ನ 1.00, 1.25, 2.40, 3.00 ಮತ್ತು ಸಂಜೆ 5.00 ಗಂಟೆಗೆ ಕಾರ್ಯನಿರ್ವಹಿಸುತ್ತವೆ. ಈ ಬಸ್ಸುಗಳು ಪಡಿಲ್, ಮರೋಳಿ, ನಂತೂರು, ಕದ್ರಿ ಮತ್ತು ಜ್ಯೋತಿ ಮಾರ್ಗವಾಗಿ ಸಂಚರಿಸುತ್ತವೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೊಡಿಕಲ್‌ಗೆ:
ಬಸ್ಸುಗಳು ಬೆಳಗ್ಗೆ 8.00, 9.00, 9.50, 11.00, ಮಧ್ಯಾಹ್ನ 12.15, 2.30 ಮತ್ತು 3.30ಕ್ಕೆ ಲಭ್ಯವಿವೆ. ಇವು ಪಡೀಲ್, ಮರೋಳಿ, ಕಂಕನಾಡಿ ಮಾರ್ಕೆಟ್, ಮಲ್ಲಿಕಟ್ಟೆ, ಕೆಪಿಟಿ, ಲಾಲ್‌ಬಾಗ್, ಉರ್ವ ಸ್ಟೋರ್ ಮತ್ತು ಕೊಟ್ಟಾರ ಮಾರ್ಗವಾಗಿ ಸಂಚರಿಸುತ್ತವೆ.

ಈ ಹೊಸ ಸಾರಿಗೆ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

33 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

45 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago