Featured

ಮಂಗಳೂರು : ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು : ನೂತನ ಕಮಿಷನರ್ ಸುಧೀರ್ ರೆಡ್ಡಿ – vishwanews24

ಮಂಗಳೂರು : ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು : ನೂತನ ಕಮಿಷನರ್ ಸುಧೀರ್ ರೆಡ್ಡಿ

ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು.

ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ.ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು.

ಕೋಮುದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಯಾರದ್ದೇ ಯಾವ ಮಾತು ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ ಮತ್ತು ಅಪರಾಧ ಕೃತ್ಯಗಳಿಗೆ ಜನರನ್ನು ಪ್ರಚೋದಿಸುವ ಮಾತುಗಳ ನಡುವೆ ಸ್ಪಷ್ಟವಾದ ಅಂತರವಿದೆ. ಪ್ರಚೋದನೆ ನೀಡುವ ರೀತಿಯಲ್ಲಿ ಕಾನೂನಿಗೆ ವಿರುದ್ಧವಾಗಿ ಮಾತನಾಡಿದರೆ, ಸಿಆರ್‌ಪಿಸಿ, ಐಪಿಸಿ ಕಾನೂನುಗಳಿವೆ. ಕಾನೂನಿನಲ್ಲಿ ಈ ಬಗ್ಗೆ ಕ್ರಮಕ್ಕೆ ಸಾಕಷ್ಟು ಅವಕಾಶಗಳಿದ್ದು, ಇಲಾಖೆ ಸೂಕ್ತ ಕ್ರಮ ವಹಿಸಲಿದೆ ಎಂದು ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು.

ಕೋಮುದ್ವೇಷ, ಯಾವುದೇ ಘಟನೆ ಆದಾಗ ತನಿಖೆ ನಡೆಸುತ್ತೇವೆ. ಇಲ್ಲಿನ ಜನರು ಬುದ್ಧಿವಂತರು. ಅವರಿಗೆ ಕಾನೂನಿನ ಅರಿವಿದೆ. ನಮ್ಮ ಪೊಲೀಸ್ ಇಲಾಖೆಯೂ ಅದೇ ಕಾನೂನನ್ನು ಕಲಿತು, ಅದನ್ನು ಪಾಲಿಸುತ್ತದೆ. ಪ್ರತಿ ಅಪರಾಧಕ್ಕೂ ತಕ್ಕುದಾದ ಕಾನೂನು ಇದೆ. ಆ ಕಾನೂನಿಗೆ ಅನುಸಾರವಾಗಿ ಕ್ರಮ ಆಗುತ್ತದೆ ಎಂದು ಅವರು ಹೇಳಿದರು.

ಠಾಣೆಗಳಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ತಳ ಹಂತದ ಪೊಲೀಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯವಿರುವ ಬೇಡಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಎಲ್ಲಾ ಅಧಿಕಾರಿ ಸಿಬ್ಬಂದಿ ಉತ್ತಮವಾಗಿದ್ದಾರೆ. ಯಾರೇ ತಮ್ಮ ಕರ್ತವ್ಯದಲ್ಲಿ ವಿಫಲ ಆಗಿದ್ದಾರೆ ಎಂದರೆ ಅದರ ಜವಾಬ್ಧಾರಿಯನ್ನು ನಾನು ವಹಿಸುತ್ತೇನೆ. ನಮ್ಮ ಮಾರ್ಗದರ್ಶನವನ್ನು ಸರಿಯಾದ ದಿಸೆಯಲ್ಲಿ ಬಳಸಿಕೊಂಡು ಅವರು ಕಾರ್ಯ ನಿರ್ವಹಿಸಿದಾಗ ಯಾವುದೇ ತೊಂದರೆ ಆಗದು ಎಂದು ಹೇಳಿದರು.

ಪೊಲೀಸ್ ಕಮಿಷನರ್ ನಡೆಸುತ್ತಿದ್ದ ಫೋನ್ ಇನ್ ಕಾರ್ಯಕ್ರಮ ಮತ್ತೆ ಪುನರಾರಂಭ ಆಗಲಿದೆಯೇ ಎಂಬ ಪ್ರಶ್ನೆಗೆ, ಯಾವುದೇ ದೂರನ್ನು ಸಾರ್ವಜನಿಕರು ನೇರವಾಗಿ ನಮಗೆ ತರಬಹುದು. ಮಾಧ್ಯಮದ ಮೂಲಕ ಬಂದ ದೂರನ್ನು ಪರಿಗಣಿಸಲಾಗುವುದು. ಯಾವುದೇ ಅಪರಾಧ ಪ್ರಕರಣಗಳು ನಡೆದಾಗಲೂ ಹಿಂದೆಯೂ ತನಿಖೆ ಆಗಿದೆ. ಮುಂದೆಯೂ ಆಗಲಿದೆ. ನಮ್ಮ ಕೆಲಸವೇ ಪೊಲೀಸಿಂಗ್ ಮಾಡುವಂತದ್ದು. ಅದನ್ನು ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದರು.

ಡಿಸಿಪಿ ಸಿದ್ದಾರ್ಥ್ ಗೋಯಲ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago