ಮಂಗಳೂರು, : ಜನರು ವಿಕೇಂಡ್ ಕರ್ಫ್ಯೂಗೆ ನೀಡಿದ ಸಹಕಾರ ಲಾಕ್ಡೌನ್ ಸಂದರ್ಭದಲ್ಲೂ ನೀಡಲಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ನಾಳೆಯಿಂದ ಮೇ 12 ರ ಬೆಳಿಗ್ಗೆ 6 ರವರೆಗೆ 14 ದಿನಗಳ ಲಾಕ್ಡೌನ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಲಾಕ್ಡೌನ್ ಸಂದರ್ಭ ಸಹಕಾರ ನೀಡುವಂತೆ ಮನವಿ ಮಾಡಿದರು.
ಜನರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಹೇಗೆ ಸಹಕರಿಸಿದಿರೋ ಹಾಗೆಯೇ ಮೇ 12 ರವರೆಗೆ ಜನರು ಸಹಕರಿಸಬೇಕೆಂದು ವಿನಂತಿಸಿದರು.
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 54 ಚೆಕ್ಪೋಸ್ಟ್ಗಳು, 3 ಮೊಬೈಲ್ ಸ್ಕ್ವಾಡ್ಗಳು ಇರಲಿದ್ದು, ಸುಮಾರು 1000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಕೂಡಾ ಮಾಹಿತಿ ನೀಡಿದರು.
ಇನ್ನು ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯವಿರುವಾಗ ಜನರಿಗೆ ಸಹಕರಿಸುವಂತೆ ಪೊಲೀಸರುಗೆ ಸಹ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…