ಮಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಗೊಂದಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಗ್ರಾಮ ಮಟ್ಟದಿಂದ ವಿಧಾನಸೌಧದ ತನಕ ಆಡಳಿತ ವ್ಯವಸ್ಥೆ ಕುಸಿದಿದೆ. ಇದನ್ನೆಲ್ಲ ನೋಡಿದರೆ ಜನವರಿ ವೇಳೆಗೆ ಈ ಸರಕಾರ ಪತನವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಧ್ಯಾಂತರ ಚುನಾವಣೆಗೆ ಸಿದ್ಧತೆ ನಡೆಸಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ಹೇಳಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನವೆಂಬರ್ನಲ್ಲಿ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಬಿಜೆಪಿಗೆ ಸಂಬಂಧಿಸಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ನವೆಂಬರ್ ಕ್ರಾಂತಿ ಅನ್ನುವುದು ಕಾಂಗ್ರೆಸ್ ನವರೇ ಹುಟ್ಟು ಹಾಕಿರುವಂಥದ್ದು. ರಾಜ್ಯದ ಜನತೆ ಬಹುಮತವನ್ನು ಕೊಟ್ಟಾಗ ಒಳ್ಳೆಯ ಆಡಳಿತವನ್ನು ನಿರೀಕ್ಷಿಸಿದ್ದೆವು. ಆದರೆ ಅದರ ಬದಲು ಆಂತರಿಕ ಕಚ್ಚಾಟದಲ್ಲಿ ಈ ಸರಕಾರ ಮುಳುಗಿದೆ ಎಂದರು.
ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ದಿಲ್ಲಿಗೆ ಹೋಗುವುದನ್ನು ಸಿಎಂ ಮತ್ತು ಡಿಸಿಎಂ ಮರೆತಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿ ವಿರುದ್ಧ ಪ್ರತಿಭಟನೆಗೆ ವಿಶೇಷ ವಿಮಾನದಲ್ಲಿ ಹೋಗಿದ್ದರು. ಈ ಸರಕಾರ ಯಾವಾಗ ಕುಸಿದು ಬೀಳುತ್ತದೆ ಎನ್ನುವುದನ್ನು ಜನರು ನಿರೀಕ್ಷೆಯಿಂದ ನೋಡುತ್ತಿದ್ದಾರೆ. ರಾಜ್ಯದಲ್ಲಿ ಶೇ. 80 ಕಮಿಷನ್ ಆಗಿದೆ. ದುಡ್ಡು ಕೊಟ್ಟರೂ ಕೆಲಸ ಆಗದ ವಾತಾವರಣ ಗ್ರಾ.ಪಂ. ತನಕ ಬಂದಿದೆ. ಕರಾವಳಿ ಭಾಗದ ಜಿಲ್ಲೆಗಳ ಸಂಪೂರ್ಣ ನಿರ್ಲಕ್ಷಿಸಲಾಗಿದೆ
ಎಂದು ಟೀಕಿಸಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…