ಮಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಗೊಂದಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಗ್ರಾಮ ಮಟ್ಟದಿಂದ ವಿಧಾನಸೌಧದ ತನಕ ಆಡಳಿತ ವ್ಯವಸ್ಥೆ ಕುಸಿದಿದೆ. ಇದನ್ನೆಲ್ಲ ನೋಡಿದರೆ ಜನವರಿ ವೇಳೆಗೆ ಈ ಸರಕಾರ ಪತನವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಧ್ಯಾಂತರ ಚುನಾವಣೆಗೆ ಸಿದ್ಧತೆ ನಡೆಸಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ಹೇಳಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನವೆಂಬರ್ನಲ್ಲಿ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಬಿಜೆಪಿಗೆ ಸಂಬಂಧಿಸಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ನವೆಂಬರ್ ಕ್ರಾಂತಿ ಅನ್ನುವುದು ಕಾಂಗ್ರೆಸ್ ನವರೇ ಹುಟ್ಟು ಹಾಕಿರುವಂಥದ್ದು. ರಾಜ್ಯದ ಜನತೆ ಬಹುಮತವನ್ನು ಕೊಟ್ಟಾಗ ಒಳ್ಳೆಯ ಆಡಳಿತವನ್ನು ನಿರೀಕ್ಷಿಸಿದ್ದೆವು. ಆದರೆ ಅದರ ಬದಲು ಆಂತರಿಕ ಕಚ್ಚಾಟದಲ್ಲಿ ಈ ಸರಕಾರ ಮುಳುಗಿದೆ ಎಂದರು.
ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ದಿಲ್ಲಿಗೆ ಹೋಗುವುದನ್ನು ಸಿಎಂ ಮತ್ತು ಡಿಸಿಎಂ ಮರೆತಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿ ವಿರುದ್ಧ ಪ್ರತಿಭಟನೆಗೆ ವಿಶೇಷ ವಿಮಾನದಲ್ಲಿ ಹೋಗಿದ್ದರು. ಈ ಸರಕಾರ ಯಾವಾಗ ಕುಸಿದು ಬೀಳುತ್ತದೆ ಎನ್ನುವುದನ್ನು ಜನರು ನಿರೀಕ್ಷೆಯಿಂದ ನೋಡುತ್ತಿದ್ದಾರೆ. ರಾಜ್ಯದಲ್ಲಿ ಶೇ. 80 ಕಮಿಷನ್ ಆಗಿದೆ. ದುಡ್ಡು ಕೊಟ್ಟರೂ ಕೆಲಸ ಆಗದ ವಾತಾವರಣ ಗ್ರಾ.ಪಂ. ತನಕ ಬಂದಿದೆ. ಕರಾವಳಿ ಭಾಗದ ಜಿಲ್ಲೆಗಳ ಸಂಪೂರ್ಣ ನಿರ್ಲಕ್ಷಿಸಲಾಗಿದೆ
ಎಂದು ಟೀಕಿಸಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…