Featured

ಮಂಗಳೂರು: ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌ – vishwanews24

ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌

ಮಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಗೊಂದಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಗ್ರಾಮ ಮಟ್ಟದಿಂದ ವಿಧಾನಸೌಧದ ತನಕ ಆಡಳಿತ ವ್ಯವಸ್ಥೆ ಕುಸಿದಿದೆ. ಇದನ್ನೆಲ್ಲ ನೋಡಿದರೆ ಜನವರಿ ವೇಳೆಗೆ ಈ ಸರಕಾರ ಪತನವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಧ್ಯಾಂತರ ಚುನಾವಣೆಗೆ ಸಿದ್ಧತೆ ನಡೆಸಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್‌ಹೇಳಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಬಿಜೆಪಿಗೆ ಸಂಬಂಧಿಸಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ನವೆಂಬರ್ ಕ್ರಾಂತಿ ಅನ್ನುವುದು ಕಾಂಗ್ರೆಸ್ ನವರೇ ಹುಟ್ಟು ಹಾಕಿರುವಂಥದ್ದು. ರಾಜ್ಯದ ಜನತೆ ಬಹುಮತವನ್ನು ಕೊಟ್ಟಾಗ ಒಳ್ಳೆಯ ಆಡಳಿತವನ್ನು ನಿರೀಕ್ಷಿಸಿದ್ದೆವು. ಆದರೆ ಅದರ ಬದಲು ಆಂತರಿಕ ಕಚ್ಚಾಟದಲ್ಲಿ ಈ ಸರಕಾರ ಮುಳುಗಿದೆ ಎಂದರು.

 

ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ದಿಲ್ಲಿಗೆ ಹೋಗುವುದನ್ನು ಸಿಎಂ ಮತ್ತು ಡಿಸಿಎಂ ಮರೆತಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿ ವಿರುದ್ಧ ಪ್ರತಿಭಟನೆಗೆ ವಿಶೇಷ ವಿಮಾನದಲ್ಲಿ ಹೋಗಿದ್ದರು. ಈ ಸರಕಾರ ಯಾವಾಗ ಕುಸಿದು ಬೀಳುತ್ತದೆ ಎನ್ನುವುದನ್ನು ಜನರು ನಿರೀಕ್ಷೆಯಿಂದ ನೋಡುತ್ತಿದ್ದಾರೆ. ರಾಜ್ಯದಲ್ಲಿ ಶೇ. 80 ಕಮಿಷನ್ ಆಗಿದೆ. ದುಡ್ಡು ಕೊಟ್ಟರೂ ಕೆಲಸ ಆಗದ ವಾತಾವರಣ ಗ್ರಾ.ಪಂ. ತನಕ ಬಂದಿದೆ. ಕರಾವಳಿ ಭಾಗದ ಜಿಲ್ಲೆಗಳ ಸಂಪೂರ್ಣ ನಿರ್ಲಕ್ಷಿಸಲಾಗಿದೆ
ಎಂದು ಟೀಕಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

23 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago