ಮಂಗಳೂರು: ರಾಜ್ಯ ಕೇಂದ್ರ ಸರ್ಕಾರದಿಂದ ಯಾವುದೇ ಸಮಸ್ಯೆ ಒತ್ತಡದಿಂದ ನಾನು ರಾಜೀನಾಮೆ ನೀಡಿಲ್ಲ ಎಂದು ದ.ಕ. ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.
ಗಾಂಧಿ 150 ಚಿಂತನಾ ಯಾತ್ರೆ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಬುಧವಾರ ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಆಡಳಿತ ಸೇವೆಯಲ್ಲಿ ಕೆಲಸ ಮಾಡಿದ ಮೂರು ಜಿಲ್ಲೆಗಳಲ್ಲಿಯೂ ಮೂರು ಪಕ್ಷದ ಮುಖಂಡರು ಸಹಕಾರ ನೀಡಿದ್ದಾರೆ. ರಾಜೀನಾಮೆ ಸ್ವಂತ ನಿರ್ಧಾರ. ಕಾರಣವನ್ನು ಪತ್ರದಲ್ಲಿ ಈಗಾಗಲೇ ಉಲ್ಲೇಖಿಸಿದ್ದೇನೆ. ಮುಂದೇನು ಮಾಡಬೇಕು ಎಂದು ನಿರ್ಧರಿಸಿಲ್ಲ. ಜನ ಸೇವೆಗೆ ಅಧಿಕಾರಿಯೇ ಆಗಿರಬೇಕೆಂದಿಲ್ಲವಲ್ಲ ಎಂದರು.
ನನ್ನ ರಾಜೀನಾಮೆ ಅಂಗೀಕಾರ ಇನ್ನೂ ಆಗಿಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರ. ಚುನಾವಣಾ ರಾಜಕೀಯದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ. ಬೆಂಗಳೂರಿನಲ್ಲಿದ್ದುಕೊಂಡೇ ನನ್ನ ಜನಸೇವೆಯ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…