ಮಂಗಳೂರು: ಕರಾವಳಿಯ ಹಿಂದೂ-ಮುಸ್ಲಿಂ ಧರ್ಮ ದಂಗಲ್ ಮಧ್ಯೆಯೂ ತುಳುನಾಡಿನಲ್ಲಿ ಭಾವೈಕ್ಯತೆಯ ಸಂಪ್ರದಾಯವೊಂದು ಮುಂದುವರೆದಿದೆ. ಧಾರ್ಮಿಕ ಸಂಘರ್ಷದ ನಡುವೆಯೂ ತುಳುವರ ಆರಾಧ್ಯ ದೈವಗಳು ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರನ್ನ ಸಾಂಪ್ರದಾಯಿಕವಾಗಿ ಜಾತ್ರೋತ್ಸವಕ್ಕೆ ಆಹ್ವಾನಿಸಿದೆ.
ತುಳುನಾಡಿನ ಗಡಿನಾಡಿನಲ್ಲಿ ಸಾಂಪ್ರದಾಯಿಕ ಆಚರಣೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರದ ಜಾತ್ರೆಯ ಪೂರ್ವಭಾವಿಯಾಗಿ ಉದ್ಯಾವರ ಸಾವಿರ ಜಮಾಅತ್ ಮಸೀದಿಗೆದೈವಗಳ ಭೇಟಿ ವಾಡಿಕೆ. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಸಂಪ್ರದಾಯದಂತೆ ಅರಸು ದೈವ ಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗೂ ಸಹಸ್ರಾರು ಹಿಂದೂ ಬಾಂಧವರು ಮಸೀದಿಗೆ ಭೇಟಿ ನೀಡಿದ್ದಾರೆ.
ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಪ್ರಾಚೀನ ಕಾಲದಿಂದಲೇ ಆಚರಿಸಿಕೊಂಡು ಬಂದಿರುವ ಸಂಪ್ರದಾಯ ಇದಾಗಿದ್ದು, ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು ಮಸೀದಿ ಭೇಟಿ ಮಾಡಿವೆ. ಮಸೀದಿಯ ಆಡಳಿತ ಸಮಿತಿ ಪ್ರತಿನಿಧಿಗಳು ಹಾಗೂ ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ.
ಜಮಾಅತ್ನೊಳಗೆ ಪ್ರವೇಶಿಸಿದ ದೈವ ಪಾತ್ರಿಗಳು ಮುಸ್ಲಿಂ ಬಾಂಧವರಿಗೆ ಜಾತ್ರೋತ್ಸವಕ್ಕೆ ಆಹ್ವಾನ ನೀಡಿದ್ದಾರೆ. ಮೇ 9ರಿಂದ 15ರ ತನಕ ಮಾಡ ಕ್ಷೇತ್ರದ ಉತ್ಸವಕ್ಕೆ ಸಾವಿರ ಜಮಾಅತ್ ಗೆ ಆಹ್ವಾನ ನೀಡಲಾಗಿದೆ. ನೇಮೋತ್ಸವದ ದಿನ ಜಮಾಅತ್ನ ಮುಖ್ಯಸ್ಥರಿಗೆ ಕೂರಲು ದೇವಸ್ಥಾನದ ಕಟ್ಟೆಯಲ್ಲಿ ವಿಶೇಷವಾದ ಸ್ಥಳವನ್ನು ಕೂಡ ನೀಡಲಾಗುತ್ತದೆ. ದೈವಗಳು ಆಶೀರ್ವದಿಸಿದ ಮಲ್ಲಿಗೆ ಹೂವುಗಳನ್ನು ಜಮಾಅತ್ನವರಿಗೆ ನೀಡುವುದು ಕೂಡ ಇಲ್ಲಿನ ಸಂಪ್ರದಾಯ. ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದರೂ ತುಳು ಭಾಷಿಗರೇ ಹೆಚ್ಚಾಗಿರುವ ಗಡಿ ಭಾಗದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮುಂದುವರೆದಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…