Featured

ಮಂಗಳೂರು: ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ : ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಪ್ರತಿಭಟನೆ : ಮಿಥುನ್ ರೈ – Vishwanews24

ದೇವಸ್ಥಾನದ ಜಾತ್ರೆ – ಉತ್ಸವಗಳ ಸಂದರ್ಭ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಮತಿ ಇಲ್ಲ  : ಮಿಥುನ್ ರೈ ತೀವ್ರವ ಖಂಡನೆ

ಬಪ್ಪನಾಡು ರಥದ ಮೇಲಿರುವ ಮುಖ್ಯ ಛಾಯಾಚಿತ್ರ ಬಪ್ಪ ಬ್ಯಾರಿಯದ್ದು..

ಇಂತಹ ಸಮಾಜಘಾತುಕ ಕೃತ್ಯಗಳನ್ನು ಕ್ಷೇತ್ರದ ತಾಯಿ ಕೂಡಾ ಮೆಚ್ಚಲಾರರು..

ಜಾತ್ರೆ, ಉತ್ಸವ ಬಂದು ವ್ಯಾಪಾರ ಮಾಡುವವರು ಬಡಪಾಯಿಗಳು, ಹೊಟ್ಟೆ ಪಾಡಿಗಾಗಿ ವ್ಯಾಪಾರ ಮಾಡುವವರು..

ಮಂಗಳೂರು : ದೇವಸ್ಥಾನದ ಜಾತ್ರೆ – ಉತ್ಸವಗಳ ಸಂದರ್ಭ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಮತಿ ಇಲ್ಲ ಎಂಬ ಬ್ಯಾನರ್‌ಗಳನ್ನು ಹಾಕಿರುವುದನ್ನು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮೂಲ್ಕಿ ಬಪ್ಪನಾಡು ದೇವಸ್ಥಾನವು ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ವಾರ್ಷಿಕ ದೇವಾಲಯದ ಜಾತ್ರೆಯ ಸಮಯದಲ್ಲಿ, ಸುಮಾರು 1.5 ಲಕ್ಷ ಮಲ್ಲಿಗೆಯನ್ನು ದೇವಿಗೆ ಅರ್ಪಿಸಲಾಗುತ್ತದೆ. ಈ ಮಲ್ಲಿಗೆಯನ್ನು ಶಂಕರಪುರದ ಕ್ರಿಶ್ಚಿಯನ್ನರು ಬೆಳೆಸುತ್ತಾರೆ, ಮುಸ್ಲಿಮರು ಮಾರಾಟ ಮಾಡುತ್ತಾರೆ ಮತ್ತು ಹಿಂದೂಗಳು ದೇವಿಗೆ ಅರ್ಪಿಸುತ್ತಾರೆ.ಬಪ್ಪನಾಡು ರಥದ ಮೇಲಿರುವ ಮುಖ್ಯ ಛಾಯಾಚಿತ್ರ ಬಪ್ಪ ಬ್ಯಾರಿಯದ್ದು. ಈ ಪುಣ್ಯಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗಿದೆ.

ಆದರೆ ವಿವಾದಾತ್ಮಕ ಬ್ಯಾನರ್ ಪ್ರದರ್ಶಿಸಿ ಅವ್ಯವಸ್ಥೆ ಸೃಷ್ಟಿಸಲಾಗಿದೆ. ಶ್ರೀ ಕ್ಷೇತ್ರದ ಆಡಳಿತ ಮಂಡಳಿ ತಮಗೂ ಬ್ಯಾನರ್ ಗೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಜಿಲ್ಲಾಡಳಿತ ಬ್ಯಾನರ್ ತೆರವಿಗೆ ವಿಳಂಬ ಮಾಡುತ್ತಿರುವುದು ಅವ್ಯವಸ್ಥೆಯನ್ನು ಹೆಚ್ಚಿಸಿದೆ.ಜಿಲ್ಲಾಡಳಿತ ಇಂತಹ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿರುವುದು ಸ್ಪಷ್ಟವಾಗಿ ತಿಳಿಯುತ್ತದೆ. ಇಂತಹ ಸಮಾಜಘಾತುಕ ಕೃತ್ಯಗಳನ್ನು ಕ್ಷೇತ್ರದ ತಾಯಿ ಕೂಡಾ ಮೆಚ್ಚಲಾರರು ’ ಎಂದು ಮಿಥುನ್ ರೈ ಹೇಳಿದ್ದಾರೆ.

ಜಾತ್ರೆ, ಉತ್ಸವ ಬಂದು ವ್ಯಾಪಾರ ಮಾಡುವವರು ಬಡಪಾಯಿಗಳು, ಹೊಟ್ಟೆ ಪಾಡಿಗಾಗಿ ವ್ಯಾಪಾರ ಮಾಡುವವರು ಈ ರಾಜಕೀಯ ಬೇಕಿಲ್ಲ . ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago