Featured

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಆದೇಶ ಹಿಂಪಡೆಯುವುದಿಲ್ಲ: ಡಿಸಿ ಮುಗಿಲನ್ ಸ್ಪಷ್ಟನೆ  – vishwanews24

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಆದೇಶ ಹಿಂಪಡೆಯುವುದಿಲ್ಲ: ಡಿಸಿ ಮುಗಿಲನ್ ಸ್ಪಷ್ಟನೆ

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು’ ಎಂದಿದ್ದಾರೆ.

‘ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ-ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ. ಆದರೆ, ತಮಿಳುನಾಡಿನಲ್ಲಿ ನಿರ್ಬಂಧ ಹೇರಲಾಗಿದೆ. ಇಲ್ಲಿ ಅಂತಹ ನಿರ್ಬಂಧಗಳು ಜಾರಿಯಾಗಬೇಕಾದರೆ ರಾಜ್ಯ ಮಟ್ಟದಲ್ಲಿ ಜಾರಿಯಾಗಬೇಕು. ಚಿಕ್ಕಮಗಳೂರಿನ ಆಟೋ ರಿಕ್ಷಾ ಚಾಲಕರು ಈಗಾಗಲೇ ತಮಿಳುನಾಡಿನಲ್ಲಿರುವಂತಹ ನಿರ್ಬಂಧಗಳು ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ’ ಎಂದು ಹೇಳಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago