Featured

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಆದೇಶ ಹಿಂಪಡೆಯುವುದಿಲ್ಲ: ಡಿಸಿ ಮುಗಿಲನ್ ಸ್ಪಷ್ಟನೆ  – vishwanews24

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಆದೇಶ ಹಿಂಪಡೆಯುವುದಿಲ್ಲ: ಡಿಸಿ ಮುಗಿಲನ್ ಸ್ಪಷ್ಟನೆ

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು’ ಎಂದಿದ್ದಾರೆ.

‘ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ-ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ. ಆದರೆ, ತಮಿಳುನಾಡಿನಲ್ಲಿ ನಿರ್ಬಂಧ ಹೇರಲಾಗಿದೆ. ಇಲ್ಲಿ ಅಂತಹ ನಿರ್ಬಂಧಗಳು ಜಾರಿಯಾಗಬೇಕಾದರೆ ರಾಜ್ಯ ಮಟ್ಟದಲ್ಲಿ ಜಾರಿಯಾಗಬೇಕು. ಚಿಕ್ಕಮಗಳೂರಿನ ಆಟೋ ರಿಕ್ಷಾ ಚಾಲಕರು ಈಗಾಗಲೇ ತಮಿಳುನಾಡಿನಲ್ಲಿರುವಂತಹ ನಿರ್ಬಂಧಗಳು ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ’ ಎಂದು ಹೇಳಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

29 minutes ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

57 minutes ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 hour ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

1 hour ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

5 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

6 hours ago