ಮಂಗಳೂರು,: ಕೊಡಿಯಾಲ್ಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಸುಮಾರು 300 ಪೊಲೀಸರ ತಂಡ ದಿಢೀರ್ ತಪಾಸಣೆ ನಡೆಸಿತು.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ಮಧ್ಯಾಹ್ನ ಕೆಎಸ್ಆರ್ಪಿ ಹಾಗೂ ವಿವಿಧ ಠಾಣೆಗಳ ಅಧಿಕಾರಿ, ಸಿಬಂದಿ ಸುಮಾರು ಒಂದೂವರೆ ತಾಸು ತಪಾಸಣೆ ನಡೆಸಿದರು.
ತಂಬಾಕು ಉತ್ಪನ್ನಗಳು ಪತ್ತೆ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, “ಇಂಥ ದಿಢೀರ್ ಭೇಟಿಯನ್ನು ಆಗಿಂದಾಗ್ಗೆ ಮಾಡಲಾಗುವುದು. ತಪಾಸಣೆ ವೇಳೆ ಬೀಡಿ, ಸಿಗರೇಟು, ತಂಬಾಕು ಪತ್ತೆಯಾಗಿದೆ.
ಮಾದಕ ವಸ್ತು ಅಥವಾ ಬೇರೆ ವಸ್ತುಗಳು ಸಿಕ್ಕಿಲ್ಲ. ಕೈದಿಗಳು ಮೊಬೈಲ್ ಕರೆ ಮಾಡುತ್ತಿರುವ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ. ಕಾರಾಗೃಹದಲ್ಲಿ ಕೆಎಸ್ಐಎಸ್ ಎಫ್(ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಹಾಗೂ ಕಾರಾಗೃಹ ಅಧಿಕಾರಿಗಳು ನಿರಂತರ ವಾಗಿ ಸಮರ್ಪಕವಾಗಿ ತಪಾಸಣೆ ನಡೆಸುತ್ತಿದ್ದಾರೆ. ಕಾರಾಗೃಹ ಅಧೀಕ್ಷಕ ರೊಂದಿಗೆ ಮಾತುಕತೆ ನಡೆಸಿದ್ದೇನೆ’ ಎಂದು ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅಂಶುಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಕಾರಾಗೃಹದಲ್ಲಿ ರವಿವಾರ 400 ಪುರುಷರು, 8 ಮಹಿಳೆಯರು ಸಹಿತ ಒಟ್ಟು 408 ಮಂದಿ ವಿಚಾರಣಾಧೀನ ಕೈದಿಗಳಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…