ಮಂಗಳೂರು,: ಕೊಡಿಯಾಲ್ಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಸುಮಾರು 300 ಪೊಲೀಸರ ತಂಡ ದಿಢೀರ್ ತಪಾಸಣೆ ನಡೆಸಿತು.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ಮಧ್ಯಾಹ್ನ ಕೆಎಸ್ಆರ್ಪಿ ಹಾಗೂ ವಿವಿಧ ಠಾಣೆಗಳ ಅಧಿಕಾರಿ, ಸಿಬಂದಿ ಸುಮಾರು ಒಂದೂವರೆ ತಾಸು ತಪಾಸಣೆ ನಡೆಸಿದರು.
ತಂಬಾಕು ಉತ್ಪನ್ನಗಳು ಪತ್ತೆ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, “ಇಂಥ ದಿಢೀರ್ ಭೇಟಿಯನ್ನು ಆಗಿಂದಾಗ್ಗೆ ಮಾಡಲಾಗುವುದು. ತಪಾಸಣೆ ವೇಳೆ ಬೀಡಿ, ಸಿಗರೇಟು, ತಂಬಾಕು ಪತ್ತೆಯಾಗಿದೆ.
ಮಾದಕ ವಸ್ತು ಅಥವಾ ಬೇರೆ ವಸ್ತುಗಳು ಸಿಕ್ಕಿಲ್ಲ. ಕೈದಿಗಳು ಮೊಬೈಲ್ ಕರೆ ಮಾಡುತ್ತಿರುವ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ. ಕಾರಾಗೃಹದಲ್ಲಿ ಕೆಎಸ್ಐಎಸ್ ಎಫ್(ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಹಾಗೂ ಕಾರಾಗೃಹ ಅಧಿಕಾರಿಗಳು ನಿರಂತರ ವಾಗಿ ಸಮರ್ಪಕವಾಗಿ ತಪಾಸಣೆ ನಡೆಸುತ್ತಿದ್ದಾರೆ. ಕಾರಾಗೃಹ ಅಧೀಕ್ಷಕ ರೊಂದಿಗೆ ಮಾತುಕತೆ ನಡೆಸಿದ್ದೇನೆ’ ಎಂದು ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅಂಶುಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಕಾರಾಗೃಹದಲ್ಲಿ ರವಿವಾರ 400 ಪುರುಷರು, 8 ಮಹಿಳೆಯರು ಸಹಿತ ಒಟ್ಟು 408 ಮಂದಿ ವಿಚಾರಣಾಧೀನ ಕೈದಿಗಳಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…