Featured

ಮಂಗಳೂರು: ಜಿಲ್ಲೆಗೆ 6 ಲಕ್ಷ ಧ್ವಜ ಮಾರಾಟಕ್ಕೆ ಚಾಲನೆ ನೀಡಿದ ಸಚಿವ ಸುನಿಲ್‌ ಕುಮಾರ್‌ – Vishwanews24

ದಕ್ಷಿಣ ಕನ್ನಡ : ಜಿಲ್ಲೆಗೆ 6 ಲಕ್ಷ ಧ್ವಜ ಮಾರಾಟಕ್ಕೆ ಚಾಲನೆ ನೀಡಿದ ಸಚಿವ .ಸುನಿಲ್‌ ಕುಮಾರ್‌

ಮಂಗಳೂರು: ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆ ಮನೆಗಳ ಮೇಲೆ ಧ್ವಜಾರೋಹಣ ಹಾರಿಸಲು ಅನುವಾಗುವಂತೆ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಲಕ್ಷ ಧ್ವಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ. ಇದೇ 13ರಂದು ಸಾರ್ವಜನಿಕರು ತಮ್ಮ ಮನೆ, ವ್ಯಾಪಾರದ ಸ್ಥಳಗಳ ಮೇಲೆ ಧ್ವಜಾರೋಹಣ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ತಾಲ್ಲೂಕು ಪಂಚಾಯಿತಿ, ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಷ್ಟ್ರಧ್ವಜ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯಿತಿ ಒಕ್ಕೂಟ, ರಾಯಿ ಗ್ರಾಮ‌ ಪಂಚಾಯಿತಿ ಸದಸ್ಯರು ತಯಾರಿಸಿದ ರಾಷ್ಟ್ರಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವರು ಚಾಲನೆ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ‌ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಇದ್ದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago